Follow Us On

WhatsApp Group
Important
Trending

ವಿಷಸೇವಿಸಿ ಜಲಾಶಯಕ್ಕೆ ಹಾರಿ ಪ್ರಾಣಬಿಟ್ಟ ಪ್ರೇಮಿಗಳು: ಮನೆಯಲ್ಲಿ ಪ್ರೇಮಕ್ಕೆ ವಿರೋಧ?

ಮುಂಡಗೋಡ: ತಾಲೂಕಿನ ಚಾಚಣಕಿ ಜಲಾಶಯದಲ್ಲಿ ಯುವತಿಯ ಶವ ಪತ್ತೆಯಾಗಿದೆ. ಇದೇ ಸ್ಥಳದಲ್ಲಿ ಪುರುಷರು ಧರಿಸುವ ಪಾದರಕ್ಷೆ ಪತ್ತೆಯಾಗಿದ್ದು, ಯುವಕನೂ ಸ್ಥಳದಲ್ಲಿದ್ದರಬಹುದು ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಯುವತಿಯು ಕಲಕೇರಿ ಗ್ರಾಮದ ನಿವಾಸಿ ಎನ್ನಲಾಗಿದ್ದು, ತಾಲ್ಲೂಕಿನ ಕಾಲೇಜೊಂದರಲ್ಲಿ ಪಿಯುಸಿ ಓದುತ್ತಿದ್ದರು ಎಂದು ತಿಳಿದು ಬಂದಿದೆ.

ಯುವಕನು ಬಿ.ಎ. ವಿದ್ಯಾರ್ಥಿಯಾಗಿದ್ದು, ಹನಮಾಪುರ ಗ್ರಾಮದ ನಿವಾಸಿ ಎನ್ನಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಯುವಕ ಮತ್ತು ಯುವತಿ ಇಬ್ಬರು ಇದ್ದರೇ, ಅವರು ಜಲಾಶಯದ ಬಳಿ ಏಕೆ ಬಂದಿದ್ದರು ಎನ್ನುವುದು ಎನ್ನುವುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. ಈ ಇಬ್ಬರೂ ಪ್ರೌಢಶಾಲೆಗೆ ಹೋಗುವಾಗಲೇ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ, ಹುಡುಗಿಯ ಮನೆಯಲ್ಲಿ ಇವರ ಪ್ರೇಮಕ್ಕೆ ವಿರೋಧವಿತ್ತು ಎನ್ನಲಾಗಿದ್ದು, ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಸಾವಿಗೆ ಶರಣಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button