ಮನೆಯ ಸಮೀಪವಿದ್ದ ಕರಡದ ಬಣವೆಗೆ ಆಕಸ್ಮಿಕವಾಗಿ ಬೆಂಕಿ: ಅಪಾರ ಹಾನಿ

ಸಿದ್ದಾಪುರ: ಮನೆಯ ಸಮೀಪವಿದ್ದ ಕರಡದ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದ ಘಟನೆ ಸಿದ್ದಾಪುರ ತಾಲೂಕಿನ ಕಡಕೇರಿಯಲ್ಲಿ ನಡೆದಿದೆ. ವಿಷಯ ತಿಳಿದ ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಯಶಸ್ವಿಯಾಗಿ ಬೆಂಕಿ ನಂದಿಸಿ ಆಗುವ ಹೆಚ್ಚಿನ ಅಪಾಯಗಳನ್ನು ತಡೆದಿದ್ದಾರೆ.

ರವಿ ಗಿಡ್ಡ ನಾಯ್ಕ್ ಕಡಕೇರಿ ಎನ್ನುವವರ 125 ಕ್ಕೂ ಹೆಚ್ಚು ಕರಡದ ಹೊರೆಗಳು ಬೆಂಕಿಗೆ ಸುಟ್ಟು ಹೋಗಿದ್ದು, ರೈತರಿಗೆ ಅಪಾರ ನಷ್ಟವುಂಟಾಗಿದೆ . ಅದೃಷ್ಟವಶಾತ್ ಜಾನುವಾರುಗಳಿಗಾಗಲಿ ಜನ ಜೀವಕ್ಕೆ ಹಾನಿ ಸಂಭವಿಸಿಲ್ಲ. ಸಮಯ ಪ್ರಜ್ಞೆಯಿಂದ ಆಗುವ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ರೈತರಿಗೆ ಆದ ನಷ್ಟವನ್ನು ಸರಕಾರ ಭರಿಸುವಂತೆ ಸ್ಥಳೀಯರು ಒತ್ತಾಯ ಮಾಡಿದ್ದಾರೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ , ಸಿದ್ದಾಪುರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version