ಚರಂಡಿ ಮತ್ತು ಸಿಡಿ ನಿರ್ಮಾಣ ಕಾಮಗಾರಿಗೆ ಸಚಿವ ಹೆಬ್ಬಾರ್ ಭೂಮಿಪೂಜೆ

ಯಲ್ಲಾಪುರ: ತಾಲೂಕಿನ ಕುಂದರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕಟ್ಟಾ ಗ್ರಾಮದಲ್ಲಿ, ಉಮ್ಮಚಗಿ – ಕಾತೂರ ರಾಜ್ಯ ಹೆದ್ದಾರಿಯಲ್ಲಿ ಸಿ.ಸಿ ಚರಂಡಿ ಹಾಗೂ ಸಿಡಿ ನಿರ್ಮಾಣ ಕಾಮಗಾರಿಗಳಿಗೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಭೂಮಿ ಪೂಜೆ ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು. ನಂತರದಲ್ಲಿ ಮಾವಿನಕಟ್ಟಾ ಗ್ರಾಮದಲ್ಲಿ ನೂತನವಾಗಿ ಅಳವಡಿಸಿರುವ ಸೋಲಾರ್ ಬೀದಿ
ದೀಪವನ್ನು ಉದ್ಘಾಟಿಸಿದರು..

Exit mobile version