Important
Trending

ಓವರ್ ಟೇಕ್ ಮಾಡುವ ಭರದಲ್ಲಿ ಬೈಕಿಗೆ ಡಿಕ್ಕಿಹೊಡೆದ ಕಾರು: ಬೈಕ್ ಸವಾರ ಗಂಭೀರ ಗಾಯ

ಅಂಕೋಲಾ: ಬೈಕಿಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಂಕೋಲಾ ತಾಲೂಕಿನ ಹೆಗ್ಗಾರ ಪದ್ಮಾಪುರ ಬಳಿ ರಾಷ್ಟ್ರೀಯ 63 ರಲ್ಲಿ ಸಂಭವಿಸಿದೆ. ಈ ಹಿಂದೆ ಅಂಕೋಲಾದ ಲಕ್ಷ್ಮೇಶ್ವರದಲ್ಲಿ ನೆಲೆಸಿದ್ದ, ಸದ್ಯ ಗೋಕರ್ಣದ ಮೇಲಿನಕೇರಿ ನಿವಾಸಿಯಾಗಿರುವ ಚಿದಾನಂದ ಶಿವಾನಂದ ಶೆಟ್ಟಿ (36) ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯಾಗಿದ್ದು, ಈತ ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆ ಬರುತ್ತಿದ್ದ ಸಂದರ್ಭದಲ್ಲಿ, ಎದುರಿನಿಂದ ಅತಿ ವೇಗವಾಗಿ ಬಂದ  ಕಾರು ಚಾಲಕ ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ  ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ,ಬೈಕ್ ಸವಾರ ರಸ್ತೆಯಂಚಿಗೆ ಸಿಡಿದು ಬಿದ್ದ ಎನಲಾಗಿದೆ.

ಆತನ ಎಡ ಕೈ ಮತ್ತು ಎಡ ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ತಾಲೂಕಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ,ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನಾ ಸ್ಥಳದಿಂದ ಗಾಯಾಳು ಬೈಕ್ ಸವಾರನನ್ನು ಆಸ್ಪತ್ರೆಗೆ ಸಾಗಿಸಲು ಸ್ಥಳಿಯರು ಸಹಕರಿಸಿದರು.  ಮುದೋಳ ನಿವಾಸಿ ಹಸನಸಾಬ್ ಅಪ್ಪಾಸಾಬ್ ಭಗವಾನ್ ,ಅತಿವೇಗ ಮತ್ತು ನಿರ್ಲಕ್ಷದಿಂದ ತನ್ನ ಕಾರ್ ಚಲಾಯಿಸಿ  ಈ ಅಪಘಾತ ಪಡಿಸಿದ್ದ ಎನ್ನಲಾಗಿದ್ದು ಕಾರ್ ಚಾಲಕನ ಮೇಲೆ ಅಂಕೋಲಾ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿ ಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.                 

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button