ಸ್ಕೂಟಿಗೆ ಡಿಕ್ಕಿ ಹೊಡೆದ ಪ್ಯಾಸೆಂಜರ್ ಆಟೋ: ಮಿದುಳು ನಿಷ್ಕ್ರಿಯಗೊಂಡು ಯುವಕ ಸಾವು

ಭಟ್ಕಳ: ಪ್ಯಾಸೆಂಜರ್ ಆಟೋ ರಿಕ್ಷಾವೊಂದು ಚಲಿಸುತ್ತಿದ್ದ ಸ್ಕೂಟಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಹಿಂಬದಿ ಸವಾರ ಸಾವನ್ನಪ್ಪಿರುವ ಘಟನೆ ಹೆಬಳೆ ಬೇಲಿಗದ್ದೆ ಒಂದನೇ ಕ್ರಾಸ್ ಸಮೀಪ ನಡೆದಿದೆ.  ಮೃತ ಯುವಕನನ್ನು ಗಣೇಶ ಜಟ್ಟಾ ನಾಯ್ಕ ಮುಂಡಳ್ಳಿ ನಿವಾಸಿ ಎಂದು ತಿಳಿದು ಬಂದಿದೆ.

ಆರೋಪಿ ಪ್ಯಾಸೆಂಜರ್ ಆಟೋ ರಿಕ್ಷಾ ಚಾಲಕ ಗಣಪತಿ ನಾಯ್ಕ ಭಟ್ಕಳ ಕಡೆಯಿಂದ ತೆಂಗಿನಗುಂಡಿ ಕಡೆಗೆ ಅತಿವೇಗ ಹಾಗೂ ನಿಷ್ಕಾಳಜಿತನದಿಂದ ಆಟೋವನ್ನು  ಚಲಾಯಿಸಿಕೊಂಡು ಬಂದಿದ್ದ ಎನ್ನಲಾಗಿದೆ. ವೇಗವನ್ನು ನಿಯಂತ್ರಿಸಲಾಗದೆ ಹೆಬಳೆ ಬೇಲೆಗದ್ದೆ ಒಂದನೇ ಕ್ರಾಸ್ ಸಮೀಪ  ತೆಂಗಿನಗುಂಡಿ ಕಡೆಯಿಂದ  ಭಟ್ಕಳದ ಕಡೆಗೆ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ದಿನೇಶ ನಾಯ್ಕ ಈತನಿಗೆ ಹಣೆ ಭಾಗಕ್ಕೆ ಮತ್ತು ಕೈ ಬೆರಳಿಗೆ ಹಾಗೂ ಮುಖದ ಭಾಗಕ್ಕೆ ಗಾಯಗಳಾಗಿವೆ.

ಸ್ಕೂಟಿಯ ಹಿಂಬದಿ ಸವಾರ ಗಣೇಶ ನಾಯ್ಕ ಈತನಿಗೆ ತಲೆ ಹಾಗೂ ಮುಖದ ಭಾಗಕ್ಕೆ ಬಲವಾದ ಪೆಟ್ಟಾದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದ ವೇಳೆ ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆ ಯುವಕ ಸಾವನ್ನಪ್ಪಿದ್ದಾನೆ .


ಈ ಕುರಿತು ಪ್ಯಾಸೆಂಜರ್ ಆಟೋ ರಿಕ್ಷಾ ಚಾಲಕನ ವಿರುದ್ಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version