ಕಾರು, ಬೈಕ್ ಡಿಕ್ಕಿ: ಸೇತುವೆಯಿಂದ ನದಿಗೆ ಬಿದ್ದ ಬೈಕ್ ಸವಾರರು: ಈಜಿದಡ ಸೇರಿದ ಓರ್ವ: ಇನ್ನೊರ್ವ ನಾಪತ್ತೆ

ಹೊನ್ನಾವರ: ಸೇತುವೆಯ ಮೇಲೆ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ನೀರಿನಲ್ಲಿ ಬಿದ್ದ ಘಟನೆ ಹೊನ್ನಾವರದ ಸೇತುವೆ ಮೇಲೆ ನಡೆದಿದೆ. ದುರ್ಘಟನೆಯಲ್ಲಿ ಓರ್ವ ಈಜಿಕೊಂಡು ದಡ ಸೇರಿದ್ದು, ಇನ್ನೊರ್ವ ನಾಪತ್ತೆಯಾಗಿದ್ದಾನೆ.

ಭಟ್ಕಳ ಕಡೆಯಿಂದ ಹೊನ್ನಾವರ ಕಡೆಗೆ ಚಲಿಸುತ್ತಿದ್ದ ಕಾರು ಹೊನ್ನಾವರ ಕಡೆಯಿಂದ ಕಾಸರಕೋಡ ಕಡೆಗೆ ಚಲಿಸುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರರಿಬ್ಬರು ಶರಾವತಿ ನದಿಗೆ ಬಿದ್ದು ಓರ್ವ ನಾಪತ್ತೆಯಾಗಿದ್ದು, ಇನ್ನೊರ್ವ ಈಜಿಕೋಂಡು ದಡ ಸೇರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೈಕ್ ಸವಾರರು ಕಾಸರಕೋಡ ನಿವಾಸಿಗಳು ಎನ್ನುವ ಮಾಹಿತಿ ತಿಳಿದುಬಂದಿದ್ದು,‌ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ನದಿಯಲ್ಲಿ ಬಿದ್ದ ಓರ್ವ ವ್ಯಕ್ತಿಯ ಹುಡುಕಾಟ ಮುಂದುವರಿದಿದೆ.ಹೊನ್ನಾವರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಸ್ಮಯ ನ್ಯೂಸ್ ಶ್ರೀಧರ್ ನಾಯ್ಕ ಹೊನ್ನಾವರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version