ಚಲಿಸುತ್ತಿರುವ ಕಾರನ್ನು ಅಡ್ಡಗಟ್ಟಿ ಹಲ್ಲೆ: ಕಲ್ಲಿನಿಂದ ಕಾರಿನ ಗ್ಲಾಸ್ ಜಖಂ

ಕಾರವಾರ: ಚಲಿಸುತ್ತಿರುವ ಕಾರನ್ನು ಅಡ್ಡಗಟ್ಟಿದ ಅಪರಿಚಿತರು ಕಾರಿಗೆ ಕಲ್ಲಿನಿಂದ ಖಂಗೊಳಿಸಿದ ಘಟನೆ ತಾಲೂಕಿನ ಬಿಣಗಾದಲ್ಲಿ ನಡೆದಿರುವ ಬಗ್ಗೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ತನ್ನ ಮನೆಯಿಂದ ಮನೆಯಿಂದ ಅರ್ಗಾ ನೇವಲ್ ಬೇಸ್‌ಗೆ ಕೆಲಸಕ್ಕೆ ಹೋಗುವಾಗ ಘಟನೆ ನಡೆದಿದೆ.

ಹೊಂಡಾ ಸಿಟಿ ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದಾಗ ಬಿಣಗಾ ಬಳಿಯ ಕಾಮತ್ ನೆವಲ್ ಬೆಸ್ ಗೇಟ್ ಹತ್ತಿರದ ಹೆದ್ದಾರಿಯಲ್ಲಿ ನೀಲಿ ಬಣ್ಣದ ಬಟ್ಟೆ ಹಾಗು ಹೆಲ್ಮೆಟ್ ಧರಿಸಿದ್ದ ಇಬ್ಬರು ವ್ಯಕ್ತಿಗಳು ಕಾರನ್ನು ಅಡ್ಡಗಟ್ಟಿದ್ದಾರೆ. ನಂತರ ಕಲ್ಲಿನಿಂದ ಕಾರ್‌ಗೆ ಜಜ್ಜಿ ಮುಂದಿನ ಗ್ಲಾಸನ್ನು ಜಖಂಗೊಳಿಸಿದ್ದಾರೆ. ಬಳಿಕ ಅಲ್ಲಿಂದ ಸ್ಕೂಟಿಯಲ್ಲಿ ಸೀತಾ ನಗರದ ಕಡೆಗೆ ಪರಾರಿಯಾಗಿದ್ದಾರೆ ಎಂದು ಸಂತ್ರಸ್ತ ಗ್ರಾಮೀಣ ಠಾಣೆಗೆ ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version