ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆ: ಸಿದ್ದಾಪುರ ತಾಲೂಕಾ ಬಿಜೆಪಿ ಮಂಡಲದ ವತಿಯಿಂದ ವಿಜಯೋತ್ಸವ

ಪಂಚರಾಜ್ಯಗಳಲ್ಲಿ ನಡೆದ ಚುನಾವಣೆಯ ಪಲಿತಾಂಶದಲ್ಲಿ 4 ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ  ಸಿದ್ದಾಪುರ ತಾಲೂಕಾ ಬಿಜೆಪಿ ಮಂಡಲದ ವತಿಯಿಂದ ವಿಜಯೋತ್ಸವ ಆಚರಿಸಿದರು ಪಟ್ಟಣದ  ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಕಾರ್ಯಕರ್ತರು  ವಿಜಯೋತ್ಸವ ಆಚರಿಸಿದರು. 

ತಾಲೂಕಾ ಬಿಜೆಪಿ ಮಂಡಲದ  ಅಧ್ಯಕ್ಷರಾದ ನಾಗರಾಜ ನಾಯ್ಕ ರವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು ಈ ವೇಳೆಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಕೃಷ್ಣಮೂರ್ತಿ ಮಡಿವಾಳ ಅವರು ಮಾತನಾಡಿಪಂಚರಾಜ್ಯಗಳಲ್ಲಿ ನಡೆದ ಚುನಾವಣೆಯ ಪಲಿತಾಂಶದಲ್ಲಿ 4 ರಾಜ್ಯಗಳಲ್ಲಿ ಬಿಜೆಪಿ ವಿಶ್ವ ನಾಯಕ ನರೇಂದ್ರ ಮೋದಿ ನೇತೃತ್ವದಲ್ಲಿ ಅಮೋಘವಾದ ಸಾಧನೆಯನ್ನು ಗಳಿಸಿದೆ.

ಈ ಚುನಾವಣೆಯ ಫಲಿತಾಂಶ ಕಾಂಗ್ರೆಸ್ಸಿಗೆ ತಕ್ಕ ಪಾಠವನ್ನು ಕಲಿಸಿದೆ. ಕಾಂಗ್ರೆಸ್ ಪಕ್ಷದವರು ಟೀಕೆ ಮಾಡುವುದಕ್ಕೆ ಮಾತ್ರ ಸೀಮಿತವಾಗಿದ್ದಾರೆ ಹೊರತು ದೇಶದ ಅಭಿವೃದ್ಧಿಗಾಗಿ ಹೋರಾಟ ಮಾಡಿದವರಲ್ಲ . ನರೇಂದ್ರ ಮೋದಿಜಿ ಹಾಗೂ ಯೋಗಿ ಆದಿತ್ಯನಾಥ್ ಅವರಂತಹ ಮಹಾನ್ ಪುರುಷರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಅತ್ಯಂತ ಅಮೋಘವಾದ ಗೆಲುವನ್ನು ಸಾಧಿಸಿದೆ ಕೇಂದ್ರ ಸರ್ಕಾರದ ಸಾಧನೆಗಳು, ಸರ್ಕಾರದ ಯೋಜನೆಗಳು ದೇಶದ ಕಟ್ಟಕಡೆಯ ವ್ಯಕ್ತಿಗೂ ಕೂಡ ತಲುಪಿಸುವಲ್ಲಿ ನರೇಂದ್ರ ಮೋದಿಜಿ ಅವರ ಪಾತ್ರ ಎಷ್ಟಿದೆ ಎಂಬುದನ್ನು ಈ ಚುನಾವಣೆ ತೋರಿಸಿಕೊಟ್ಟಿದೆದೇಶದ ಕಟ್ಟಕಡೆಯ ವ್ಯಕ್ತಿಯ ವರೆಗೂ ಕೇಂದ್ರ ಸರ್ಕಾರದ ಸವಲತ್ತುಗಳು ಸಿಕ್ಕಿರುವುದು ನಮ್ಮ ಪಕ್ಷದ ಗೆಲುವಿಗೆ ಕಾರಣವಾಗಿದೆ ಎಂಬುದನ್ನು ತಿಳಿಸಲು ನಾವು ಸಿದ್ದಾಪುರ ಮಂಡಲದವರು ಹರ್ಷ ವ್ಯಕ್ತಪಡಿಸುತ್ತೇವೆ.

ಕರ್ನಾಟಕದಲ್ಲಿ ಮುಂಬರುವ ಚುನಾವಣೆಯಲ್ಲಿ ಇದೇ ರೀತಿಯಾಗಿ ಗೆಲುವನ್ನು ನಾವು ಸಾಧಿಸುತ್ತೇವೆ ಎಂಬ ಆಶಾಭಾವನೆಯನ್ನು ಇಂದು ನಾವು ವ್ಯಕ್ತಪಡಿಸುತ್ತೇವೆ ಎಂದರು ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಸದಸ್ಯರಾದ ಗುರುರಾಜ್ ಶಾನಭಾಗ್, ಸುಧೀರ್ ನಾಯ್ಕ್, ಪ್ರಮುಖ ರಾದ ಪ್ರವೀಣ್ ನಾಯ್ಕ್ ಲಕ್ಸ್ಮಿಶ್, ಪಾಂಡುರಂಗ,ತೋಟಪ್ಪ ಮುಂತಾದವರು ಉಪಸ್ಥಿತರಿದ್ದರು

Exit mobile version