Follow Us On

WhatsApp Group
Important
Trending

ಬಾಲಕಿಯರ ವಸತಿ ನಿಲಯದ ಸಮೀಪ ಹೆಣ್ಣು ಶಿಶುವಿನ ಮೃತದೇಹ ಪತ್ತೆ

ಕಾರವಾರ: ಹೆಣ್ಣು ಶಿಶುವಿನ ಮೃತದೇಹವೊಂದು ಮುಂಡಗೋಡ ತಾಲೂಕಿನ ಕರಗಿನ ಕೊಪ್ಪ ಸಮೀಪದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿಪತ್ತೆಯಾಗಿದೆ. ಪ್ರಸವದ ನಂತರ ಮಗುವನ್ನು ಎಸೆಯಲಾಗಿದೆಯೇ ಅಥವಾ ಅವಧಿ ಪೂರ್ವವೇ ಸತ್ತಿರುವುದನ್ನು ಎಸೆಯಲಾಗಿದೆ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ಬಾಲಕಿಯರ ವಸತಿ ನಿಲಯದ ಹಿಂದುಗಡೆ ಈ ಕೃತ್ಯ ಬೆಳಕಿಗೆ ಬಂದಿದೆ. ಮಗುವಿನ ಜನನವನ್ನು ಬಚ್ಚಿಡುವ ಉದ್ದೇಶದಿಂದ ಇಂತಹ ನೀಚ ಕೃತ್ಯ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪಿಎಸ್‌ಐ ಬಸವರಾಜ ಮಬನೂರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button