ಉಚಿತ ಆರೋಗ್ಯ ತಪಾಸಣಾ ಶಿಬಿರ: ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಉದ್ಘಾಟನೆ

ಯಲ್ಲಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕಾರ್ಮಿಕ ಇಲಾಖೆ ಉತ್ತರಕನ್ನಡ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಪಟ್ಟಣ ಎ.ಪಿ.ಎಮ್. ಸಿ ರೈತ ಸಭಾಂಗಣದಲ್ಲಿ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಕಟ್ಟಡ ಕಾರ್ಮಿಕರಿಂದ ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ದೇಶದಲ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಕಾರ್ಮಿಕ ಇಲಾಖೆಯ ಮೂಲಕವಾಗಿ ಶ್ರಮಿಕರ ಹಾಗೂ ಅವರ ಅವಲಂಭಿತರಿಗೆ ನುರಿತ ವೈದ್ಯರಿಂದ ರಾಜ್ಯಾದ್ಯಂತ ತಪಾಸಣೆ ನಡೆಸಲಾಗುತ್ತಿದೆ. ದೇಶದ ಆರ್ಥಿಕತೆಗೆ ಶಕ್ತಿ ತುಂಬಬಲ್ಲ ಕಾರ್ಮಿಕ ಈ ದೇಶದ ಆಸ್ತಿ ಆತನ ಮತ್ತು ಆತನ ಕುಟುಂಬದ ಆರೋಗ್ಯ ಚೆನ್ನಾಗಿದ್ದರೆ ದೇಶದ ಪ್ರಗತಿಗೆ ವೇಗ ದೊರೆಯಲಿದೆ ಎಂದರು.

ವಿಸ್ಮಯ ನ್ಯೂಸ್ ಯಲ್ಲಾಪುರ

Exit mobile version