Follow Us On

WhatsApp Group
Important
Trending

ಅಂಗಡಿಯಲ್ಲಿ ಅಕ್ರಮವಾಗಿ ಸಾರಾಯಿ ಸಂಗ್ರಹ: ಆರೋಪಿಯನ್ನು ಬಂಧಿಸಿದ ಪೊಲೀಸರು

ಹೊನ್ನಾವರ: ಹೋಳಿ ಹಬ್ಬದ ಸಮಯದಲ್ಲಿ ಸಾರಾಯಿ ಮಾರಾಟ ಮಾಡಿ ಅಕ್ರಮವಾಗಿ ಲಾಭ ಗಳಿಸುವ ಉದ್ದೇಶದಿಂದ ಅಕ್ರಮವಾಗಿ ಸಾರಾಯಿ ದಾಸ್ತಾನು ಮಾಡಿಟ್ಟಿದ್ದ ಆರೋಪಿಯನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಹಳದೀಪುರ ಗ್ರಾಮ ವಿಜಯಕುಮಾರ ರಾಮಕೃಷ್ಣ ನಾಯ್ಕ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಅತಿಹೆಚ್ಚು ಲಾಭ ಗಳಿಸುವ ಉದ್ದೇಶದಿಂದ ಆರೋಪಿಯು ಯಾವುದೇ ಪರವಾನಿಗೆಯಿಲ್ಲದೇ ಅಕ್ರಮವಾಗಿ ತನ್ನ ಅಂಗಡಿಯಲ್ಲಿ ಅನಧಿಕೃತವಾಗಿ ಸಾರಾಯಿಯನ್ನು ದಾಸ್ತಾನು ಮಾಡಿಟ್ಟುಕೊಂಡಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ತಿಳಿದು ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಬಂಧನದ ಜೊತೆಗೆ ಸುಮಾರು 53 ಸಾವಿರ ಮೌಲ್ಯದ ಸಾರಾಯಿಯನ್ನು ವಶಪಡಿಸಿಕೊಂಡಿದ್ದಾರೆ.

ವಿಸ್ಮಯ ನ್ಯೂಸ್, ಹೊನ್ನಾವರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button