Important
Trending

ಮಗಳ ಬಟ್ಟೆ ಒಣಗಿಸಲು ಹೋದ ವ್ಯಕ್ತಿಗೆ ವಿದ್ಯುತ್ ಶಾಕ್ : ಸ್ಥಳದಲ್ಲೇ ಸಾವು

ಕಾರವಾರ: ತೊಳೆದು ಹಾಕಿದ ಮಗಳ ಬಟ್ಟೆ ಒಣಗಿಸಲು ಹೋದ ವ್ಯಕ್ತಿಗೆ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ ಮುಂಡಗೋಡ ತಾಲೂಕಿನ ಹನುಮಾಪುರ ಗ್ರಾಮದಲ್ಲಿ ನಡೆದಿದೆ. ರಮೇಶ ಮಾಳಾಪುರ (32) ಎಂಬ ವ್ಯಕ್ತಿ ಮೃತಪಟ್ಟ ದುರ್ದೈವಿ. ಈತನು ಬೆಳಗ್ಗೆಯ ಸಮಯದಲ್ಲಿ ತೊಳೆದುಹಾಕಿದ ತನ್ನ ಮಗಳ ಬಟ್ಟೆಯನ್ನು ತಮ್ಮ ಮನೆಯ ಹಿತ್ತಲಿನಲ್ಲಿ ಒಣಗಿಸಲು ಹೋದಾಗ ಮನೆಯ ವಿದ್ಯುತ್ ತಂತಿ ಸ್ಪರ್ಶಿಸಿದ ಕಾರಣ ಜೋರಾಗಿ ಕೂಗಾಡಿದ್ದಾರೆ.

ಮನೆಯವರು ಬರುವಷ್ಟರಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸಹೋದರರು ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Back to top button