ರಸ್ತೆ ದಾಟುವಾಗ ಡಿಕ್ಕಿಹೊಡೆದ ರಿಕ್ಷಾ: ಗಾಯಗೊಂಡಿದ್ದ ಪಾದಾಚಾರಿ ಚಿಕಿತ್ಸೆ ಫಲಿಸದೆ ಸಾವು

ಕುಮಟಾ: ರಸ್ತೆ ದಾಟುತ್ತಿರುವಾಗ ರಿಕ್ಷಾವೊಂದು ಬಡಿದು ಪಾದಾಚಾರಿ ಮೃತಪಟ್ಟಿರುವ ಘಟನೆ ತಾಲೂಕಿನ ಗುಡೇಅಂಗಡಿಯ ಮಾದರಿ ರಸ್ತೆಯಲ್ಲಿ ನಡೆದಿದೆ. ಶ್ರೀಧರ ನಾರಾಯಣ ಶೇಟ್ (47) ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ.

ಇವರು ರಸ್ತೆ ದಾಟುತ್ತಿರುವ ಸಂದರ್ಭದಲ್ಲಿ ರಿಕ್ಷಾ ವೇಗವಾಗಿ ಬಂದು ಬಡಿದಿದ್ದು, ಗಾಯಗೊಂಡಿರುವ ಪಾದಾಚಾರಿಗೆ ಕುಮಟಾ ಸರಕಾರಿ ಆಸ್ಪತ್ರೆಗೆ ಸೇರಿಸಿ, ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version