Follow Us On

Google News
Important
Trending

ಹೊಸದಾಗಿ ಕಟ್ಟಿಸುತ್ತಿದ್ದ ಹೊಸಮನೆಯಿಂದ ಆಕಸ್ಮಿಕವಾಗಿ ಬಿದ್ದು ಚಿಕಿತ್ಸೆ ಫಲಿಸದೆ ಮನೆ ವ್ಯಕ್ತಿ ಸಾವು

ಸಿದ್ದಾಪುರ; ಆತ ಹೊಸದಾಗಿ ಮನೆ ಕಟ್ಟಿಸುತ್ತಿದ್ದ. ಮನೆ ಕೆಲಸಕ್ಕೆ ಜೆಸಿಬಿ ಬರುವುದು ತಡವಾದ ಕಾರಣ ಮನೆಯ ಮೇಲುಗಡೆ ಹತ್ತಿ ಪರಿಶೀಲಿಸುತ್ತಿದ್ದ. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಅಥವಾ ಇನ್ಯಾವುದೋ ರೀತಿಯಿಂದ ಮನೆಯ ಮೇಲಿನಿಂದ ಕೆಳಗೆ ಬಿದ್ದು ತಲೆಗೆ ಗಂಭೀರ ಸ್ವರೂಪದ ಗಾಯವಾಗಿದೆ.

ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿದ್ದು, ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಸೋಮೇಶ್ವರ ರಾಮ ನಾಯ್ಕ್ ಕೋಲ್ ಸಿರ್ಸಿ ಮೃತ ವ್ಯಕ್ತಿ. ಮೃತನ ಹೆಂಡತಿ ಶ್ರೀಮತಿ ಸರಸ್ವತಿ ಸೋಮೇಶ್ವರ ನಾಯ್ಕ್ ಕೊಲಸಿರ್ಸಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button