ಫಾಲ್ಸ್ ನಲ್ಲಿ ಈಜುವ ವೇಳೆ ಸುಳಿಗೆ ಸಿಲುಕಿ ಓರ್ವ ಪ್ರವಾಸಿಗ ಸಾವು: ಶವ ಪತ್ತೆ

ಜೋಯಿಡಾ: ಇಲ್ಲಿನ ವಜ್ರ ಫಾಲ್ಸ್ ನಲ್ಲಿ ಪ್ರವಾಸಕ್ಕೆಂದು ಬಂದ 6 ಯುವಕರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕೆಎಲ್‌ಇ ಶಿಕ್ಷಣ ಸಂಸ್ಥೆಯಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದ ಶ್ರೀಹರಿ ಆರ್.ಅಂಗಡಿ ಎಂಬಾತ ಮೃತಪಟ್ಟ ವ್ಯಕ್ತಿ. ಆರು ಯುವಕರು ನೀರಿನಲ್ಲಿ ಈಜುವ ವೇಳೆ ಶ್ರೀಹರಿ ನೀರಿನ ಸೆಳೆತಕ್ಕೆ ಸಿಕ್ಕು ನಾಪತ್ತೆಯಾಗಿದ್ದ ಎನ್ನಲಾಗಿದೆ.

ವಿಷಯ ತಿಳಿದ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಳುಗು ತಜ್ಞರಿಂದ ಶ್ರೀಹರಿ ಶವ ಪತ್ತೆ ಮಾಡಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version