ಅನಾಥ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ನೀಡಿ ಪುನೀತ್ ರಾಜಕುಮಾರ್ ಅನಾಥಾಶ್ರಮದಲ್ಲಿ ಆಶ್ರಯ: ಸಂಬಂಧಿಕರಿದ್ದರೆ ಸಂಪರ್ಕಿಸುವಂತೆ ಕೋರಿಕೆ

ಸಿದ್ದಾಪುರ: ದಾಂಡೇಲಿಯ ಕುಳಗಿ ಸರ್ಕಲ್ ಬಳಿ ಅಪರಿಚಿತ ಪ್ರವಾಸಿಗರ ವಾಹನವೊಂದು ಅನಾಥ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಮಹಿಳೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಆಕೆಯನ್ನು ದಾಂಡೇಲಿಯ ತಾಲೂಕ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರು. ಆಕೆಯನ್ನು ನೋಡಿಕೊಳ್ಳಲು ಯಾರೂ ಇಲ್ಲದಿರುವ ಕಾರಣದಿಂದಾಗಿ ಸಿದ್ದಾಪುರ ತಾಲೂಕಿನ ಮುಗದೂರ್ಲ್ಲಿ ನ ಲ್ಲಿರುವ ಪುನೀತ್ ರಾಜಕುಮಾರ್ ಅನಾಥಾಶ್ರಮದಲ್ಲಿ ಆಶ್ರಯ ನೀಡಲು ಪೊಲೀಸ್ ರು ಮನವಿ ಮಾಡಿಕೊಂಡಿದ್ದು ಆಕೆಗೆ ಆಶ್ರಮ ದಲ್ಲಿ ಆರೈಕೆಯನ್ನು ಮಾಡಲಾಗುತ್ತಿದೆ ಎಂದು ಆಶ್ರಮದ ಮುಖ್ಯಸ್ಥರಾದ ನಾಗರಾಜ್ ನಾಯ್ಕ್ ಮಾಹಿತಿ ನೀಡಿದ್ದಾರೆ.

ಈಕೆಯ ಸಂಬಂಧಿಕರು ಯಾರಾದರೂ ಇದ್ದಲ್ಲಿ ಆಶ್ರಮ ದವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅಪಘಾತವಾದ ಸಂದರ್ಭದಲ್ಲಿ ಆಕೆಗೆ ಚಿಕಿತ್ಸೆಯನ್ನು ಕೊಡಿಸಿದ್ದಕ್ಕೆ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖಂಡ, ಸಿದ್ದಾಪುರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version