Follow Us On

WhatsApp Group
Important
Trending

ಮನೆ ಬಾಗಿಲು ಮುರಿದು ಕಳ್ಳತನ: ಆರೋಪಿಯನ್ನು ಬಂಧಿಸಿದ ಪೊಲೀಸರು

ಶಿರಸಿ: ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ನಗರದ ಮನೆಯೊಂದರಲ್ಲಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊಹ್ಮದ್ ಅಕ್ರಮ ರಿಹ್ವಾನ್ ಬಂಧಿತ ಆರೋಪಿ. ಕಳೆದ ಫೆಬ್ರುವರಿ 12 ರಂದು ನಗರದ ನೆಹರೂನಗರ ನಿವಾಸಿ ಗೌಸ್ ಅನ್ವರ್ ಬೇಗ್ ಎನ್ನುವವರ ಮನೆಯಲ್ಲಿ ಕಳ್ಳತನ ನಡೆದಿತ್ತು.

ಉತ್ತರ ಪ್ರದೇಶದ ಉನ್ನಾವನ ಮೀಯಾಗಂಜ್ ಮೂಲದ ಮೊಹ್ಮದ್ ಸದ್ಯ ಶಿರಸಿ ತಾಲ್ಲೂಕಿನ ಆರೇಕೊಪ್ಪ ಗ್ರಾಮದಲ್ಲಿ ವಾಸವಾಗಿದ್ದು ಪೊಲೀಸ್ ವಿಚಾರಣೆ ವೇಳೆ ಕಳ್ಳತನ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಮನೆಯ ಬಾಗಿಲನ್ನು ಒಡೆದು ಒಳಪ್ರವೇಶಿಸಿದ್ದ ಕಳ್ಳ ಮನೆಯ ಕಪಾಟಿನಲ್ಲಿದ್ದ 1.90 ರೂಪಾಯಿ ಹಣವನ್ನು ಕದ್ದೊಯ್ದಿದ್ದರು. ಶಿರಸಿ ಹೊಸ ಮಾರುಕಟ್ಟೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿತನಿಂದ ಕಳ್ಳತನ ಮಾಡಿದ ನಗದು ಹಣ ಹಾಗೂ ಮೊಬೈಲ್ ಪೋನ್‌ನ್ನು ಜಪ್ತುಪಡಿಸಲಾಗಿದ್ದು, ನ್ಯಾಯಾಲಯದ ಮುಂದೆ ಹಾಜರಿಪಡಿಸಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button