Follow Us On

WhatsApp Group
Focus News
Trending

ಹಿರಿಯ ಸ್ವಯಂ ಸೇವಕ, ಸರಳ-ಸಜ್ಜನ ಡಾ. ಜಠಾರ ಇನ್ನಿಲ್ಲ: ಗಣ್ಯರ ಸಂತಾಪ

ಗೋಕರ್ಣ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕ ಹಾಗೂ ಸಮಾಜ ಉನ್ನತಿಗಾಗಿ ಶ್ರಮಿಸಿದ ಹಿರಿಯ ಚೇತನ, ಗೋಕರ್ಣದ ಡಾ.ಎಸ್. ವಿ.ಜಠಾರ ನಿಧನರಾಗಿದ್ದಾರೆ. ಡಾ. ಎಸ್. ವಿ. ಜಠಾರ ಅವರು ಸುಮಾರು ಏಳು ದಶಕಗಳ ಕಾಲ ಕುಮಟಾ ತಾಲೂಕಿನಾದ್ಯಂತ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಭಾರತೀಯ ಜನತಾ ಪಕ್ಷವನ್ನು ಅತೀವ ಪರಿಶ್ರಮದಿಂದ ಕಟ್ಟಿ ಬೆಳೆಸಿದರು. ಯಾವುದೇ ಸಂಭ್ರಮ, ಪ್ರಶಸ್ತಿಗೆ ಆಸೆಪಡದೆ ಸಮಾಜದ ಏಳೆಗೆ, ಧರ್ಮೋನ್ನತಿಗೆ ಸದಾ ಶ್ರಮಿಸುತ್ತಿದ್ದ ಸರಳ, ಸಜ್ಜನ ವ್ಯಕ್ತಿತ್ವದವರಾಗಿದ್ದರು. ಇತ್ತೀಚಿಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರ ರೂಪಾಲಿ ನಾಯ್ಕ ಇತರರು ಅವರ ಮನೆಗೆ ತೆರಳಿ ಸನ್ಮಾನಿಸಿದ್ದರು.

ಗಣ್ಯಾತಿಗಣ್ಯರು, ಉಸ್ತುವಾರಿ ಸಚಿವರು, ಶಾಸಕರು ಹಾಗೂ ಇನ್ನಿತರ ಬಿಜೆಪಿ ಮುಖಂಡರು ಸಂತಾಪ ಸೂಚಿಸಿದ್ದಾರೆ. ಕಳೆದ ಒಂದೆರಡು ದಿನಗಳ ಹಿಂದಷ್ಟೇ ಅವರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಿದ್ದರು. ಅಭಿನಂದನೆ ಸ್ವೀಕರಿಸಿ ಅತ್ಯಂತ ಸಂತೋಷದಿಂದ ಅಭಿನಂದಿಸಿದ ಸರ್ವರನ್ನು ಜಠಾರ ವಂದಿಸಿದ್ದರು ಎನ್ನಲಾಗಿದೆ.

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button