Follow Us On

Google News
Important
Trending

ಈ ಜಗತ್ತಿಗೆ ಅಂಟಿದ ಅತೀ ದೊಡ್ಡ ಶಾಪ ಇಸ್ಲಾಂ: ಕೃಷ್ಣಭೂಮಿಯಲ್ಲಿ ಮೊಳಗಿದ ಪಾಂಚಜನ್ಯ ನಾಡಿನೆಲ್ಲಡೆ ಪ್ರತಿಧ್ವನಿಗೊಳ್ಳಲಿ: ಸಂಸದ ಅನಂತ್ ಕುಮಾರ್ ಹೆಗಡೆ ಹೀಗೇಕೆ ಹೇಳಿದ್ರು ನೋಡಿ?

"ಮಮದೀಕ್ಷಾ ಹಿಂದುರಕ್ಷಾ" ಕರೆ ಮತ್ತೊಮ್ಮೆ ಮಾರ್ದನಿಗೊಂಡಿದೆ

ಇಸ್ಲಾಂನ ಅತ್ಯಂತ ಅಸಹಿಷ್ಣುತೆ, ಮತೀಯತೆ ಖಂಡಿಸಿ ಮುಸ್ಲಿಮರ ನಿಯೋಗವನ್ನು ವಾಪಸ್ ಕಳುಹಿಸಿದ ಪರಮಪೂಜ್ಯ ಪೇಜಾವರ ಶ್ರೀಗಳಲ್ಲಿ ನನ್ನ ಶಿರಸಾಷ್ಟಾಂಗ ಪ್ರಣಾಮಗಳು ಹಾಗೂ ಧನ್ಯವಾದಗಳು. ಈ ಜಗತ್ತಿಗೆ ಅಂಟಿದ ಅತೀ ದೊಡ್ಡ ಶಾಪ ಇಸ್ಲಾಂ! ಮನುಷ್ಯನ ಊಹೆಗೂ ನಿಲುಕದ ಬರ್ಬರತೆ, ಹಿಂಸೆ, ಕ್ರೌರ್ಯ, ಭಯೋತ್ಪಾದನೆಯೇ ಅವರ ಘನ ಇತಿಹಾಸ. ಇಂದಿನ ವಿಶ್ವದ ಶಾಂತಿಗೆ ಅಪಾಯ, ಶಿಕ್ಷಣದ ಕೊರತೆಯಲ್ಲ, ನಿರುದ್ಯೋಗವೂ ಅಲ್ಲ, ಬಡತನವಂತೂ ಅಲ್ಲವೇ ಅಲ್ಲ.. ಇಡೀ ಜಗತ್ತಿನ ಅಪಾಯ, ಇಸ್ಲಾಂನ ಪೈಶಾಚಿಕತೆ! ಎಂದು ಸಂಸದ ಅನಂತ್ ಕುಮಾರ್ ಹೆಗಡೆ ತಮ್ಮ ಸಾಮಾಜಿಕ ಜಾಲತಾಣದ ಪೇಜ್ ನಲ್ಲಿ ವಿವಾದಾತ್ಮಕ ಹೇಳಿಕೆಯನ್ನು ಬರೆದುಕೊಂಡಿದ್ದಾರೆ. ಬರೆದುಕೊಂಡಿದ್ದಾರೆ.

ಆದರೆ ಎಡಬಿಡಂಗಿಗಳಿಗೆ ಮಾತ್ರ ಹಾಗೆನಿಸುವುದೇ ಇಲ್ಲ. ಅದನ್ನು ಅವರ ನಿರ್ವೀರ್ಯತೆ ಅಂತ ಕರೆಯಬೇಕೊ? ಹೇಡಿತನ ಅಂತ ಕರೆಯಬೇಕೊ? ಅಥವಾ ಅವರಿಗೆ ಬಡಿದ ಮಹಾ ಮೂರ್ಖತನದ ರೋಗ ಅಂತ ಹೇಳಬೇಕೊ? ಗೊತ್ತಿಲ್ಲ .ಸಂಸ್ಕೃತಿಯ ಅರಿವೇ ಇಲ್ಲದ ಸೋಗಲಾಡಿ ಶಿಕ್ಷಣದ ಪರಿಣಾಮವೋ ಏನೋ ಗೊತ್ತಿಲ್ಲ, ಅವರು ಯಾರೂ ಸಹ ಇಸ್ಲಾಂನ ಹೇಯ ಕೃತ್ಯಗಳನ್ನ ಖಂಡಿಸುವುದು ಹಾಗಿರಲಿ, ಅದರ ಬಗ್ಗೆ ಚಕಾರವನ್ನೂ ಎತ್ತುವುದಿಲ್ಲ ಅಂಥವರೂ ಯಾರೇ ಇರಲಿ ಅವರಿಗೆ ನನ್ನ ಧಿಕ್ಕಾರವಿರಲಿ!!

ಇವುಗಳ ಮಧ್ಯದಲ್ಲಿ ಅದೇನೋ ಒಂದು ಆತ್ಮಾಭಿಮಾನದ ಕೋಲ್ಮಿಂಚು ಶ್ರೀ ಪೇಜಾವರ ಶ್ರೀಗಳ ನುಡಿ ಹಾಗೂ ನಡೆ . ಅದಕ್ಕಾಗಿಯೇ ಪರಮಪೂಜ್ಯರು ನಮಗೆ ಆದರ್ಶರಾಗಿ ನಿಲ್ಲುತ್ತಾರೆ. ಹಿಂದೂ ಸಮಾಜದ ಧ್ವನಿಯಾಗಿ ನಿಂತು, ಇಸ್ಲಾಂನ ಹುಚ್ಚಾಟಗಳನ್ನು ಬಹಿರಂಗವಾಗಿ ಖಂಡಿಸಿದ್ದಾರೆ ಯಾವ ಮುಲಾಜೂ ಇಲ್ಲದೆ ಸತ್ಯವನ್ನು ಚಾಟಿಯಿಂದ ಹೊಡೆದ ಹಾಗೆ ಹೇಳಿದ್ದಾರೆ.

ಇತ್ತೀಚೆಗೆ ಪೇಜಾವರ ಶ್ರೀಗಳನ್ನು ಭೇಟಿ ಮಾಡಲು ಹೋಗಿದ್ದ ಮುಸ್ಲಿಂ ನಿಯೋಗದ ಸದಸ್ಯರು ಹಿಂದೂ- ಮುಸ್ಲಿಂ ಸಮುದಾಯದ ನಡುವೆ ಉಂಟಾಗಿರುವ ಕಂದಕದ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿಕೊಂಡಾಗ ಶ್ರೀಗಳು ಮುಸ್ಲಿಂ ನಿಯೋಗದ ಸದಸ್ಯರಿಗೆ ಚಾಟಿ ಏಟು ನೀಡಿದ್ದಾರೆ. ಮುಸ್ಲಿಂ ಸಮುದಾಯ, ಹಿಂದೆ ಅವರಿಂದಾದ ಆ ಎಲ್ಲಾ ಹಿಂಸಾಚಾರ, ದೇವಾಲಯಗಳ ಲೂಟಿ, ಹಿಂದೂ ಹೆಂಗಸರ, ಮಕ್ಕಳ ಮೇಲೆ ಎಸಗಿದ ದೌರ್ಜನ್ಯಗಳ ಆತ್ಮಾವಲೋಕನ, ಪರಾಮರ್ಶೆ ಆಗಬೇಕು ಎಂದು ಹೇಳಿದ್ದಾರೆ.

ಈಗ ಉಂಟಾದ ಸಮಸ್ಯೆ ನೂರಾರು ವರ್ಷಗಳ ದೌರ್ಜನ್ಯದ ಪ್ರತಿಫಲ, ಇದಕ್ಕೆ ಮೂಲ ಕಾರಣ ಯಾರು? ಎಂದು ಶ್ರೀಗಳು ಮುಸ್ಲಿಮರಿಗೆ ಪ್ರಶ್ನೆ ಮಾಡಿದ್ದಾರೆ. ಇಂದಿಗೂ ಸಹ ಗೋಹತ್ಯೆ, ಗೋ ಸಾಗಾಣಿಕೆ ನಿಂತಿಲ್ಲ, ಮೇಲಿಂದ ಮೇಲೆ ಹಿಂದೂಗಳ ಭಾವನೆಗಳನ್ನು ಘಾಸಿ ಮಾಡಲಾಗುತ್ತಿದೆ, ಇದರಿಂದ ಇಡೀ ಹಿಂದೂ ಸಮಾಜ ನೊಂದಿದೆ. ಈಗ ಬಂದು ಸಮಸ್ಯೆ ಬಗೆಹರಿಸಿ ಎಂದರೆ ಅದು ಕೇವಲ ನನ್ನಿಂದ ಮಾತ್ರ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಮೊದಲು ಇಸ್ಲಾಂ ಸಮಾಜ ಅದು ಮಾಡಿದ ತಪ್ಪನ್ನು ಒಪ್ಪಿ, ಆತ್ಮವಿಮರ್ಶೆ ಮಾಡಿಕೊಳ್ಳಲಿ, ನಂತರ ನೀವು ಮಾತುಕತೆಗೆ ಬನ್ನಿ ಎಂದು ಖಚಿತವಾಗಿ ತಿಳಿಸಿ ಮುಸ್ಲಿಂ ನಿಯೋಗವನ್ನು ವಾಪಸ್ ಕಳಿಸಿದ್ದಾರೆ.

ಶ್ರೀಗಳ ಈ ದಿಟ್ಟ ನಡೆಯೇ ಹಿಂದೂ ಹೃದಯಗಳಿಗೆ ಮತ್ತಷ್ಟು ಮನೋಬಲವನ್ನು ನೀಡಿದೆ, ಶ್ರೀಗಳ ಬಗ್ಗೆ ಇರುವ ಗೌರವ ನೂರ್ಮಡಿಯಾಗಿದೆ. ಹಿರಿಯ ಶ್ರೀಗಳು ಕೊಟ್ಟ “ಮಮದೀಕ್ಷಾ ಹಿಂದುರಕ್ಷಾ” ಕರೆ ಮತ್ತೊಮ್ಮೆ ಮಾರ್ದನಿಗೊಂಡಿದೆ. ಸಂನ್ಯಾಸದ ನಿಜವಾದ ಅಂತರ್ಧ್ವನಿಗೆ ಮತ್ತೊಮ್ಮೆ ನನ್ನ ಪ್ರಣಾಮಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ. ಕೃಷ್ಣಭೂಮಿಯಲ್ಲಿ ಮೊಳಗಿದ ಪಾಂಚಚನ್ಯ ನಾಡಿನೆಲ್ಲಡೆ ಪ್ರತಿಧ್ವನಿಗೊಳ್ಳಲಿ ಎಂದು ಆಶಿಸುತ್ತೇನೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button