ಅಕಾಲಿಕ ಮಳೆಯಿಂದ ಹಾನಿಗೊಳಗಾದ ಶಾಲೆಗೆ ವಿಧಾನಪರಿಷತ್ ಸದಸ್ಯ ಶಾಂತಾರಾಮ್ ಸಿದ್ಧಿ ಭೇಟಿ: ದುರಸ್ತಿಯ ಭರವಸೆ

ಯಲ್ಲಾಪುರ: ಕಳೆದ ವಾರ ಸುರಿದ ಅಕಾಲಿಕ ಭಾರಿ ಮಳೆಯಿಂದಾಗಿ ಯಲ್ಲಾಪುರ ತಾಲೂಕಿನ ಕುಂದರಗಿ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಭರತನಹಳ್ಳಿಯ ಮೇಲ್ಚಾವಣಿ ಹಾಗೂ ಅನೇಕ ಅನೇಕ ಹಾನಿ ಉಂಟಾಗಿತ್ತು. ಸ್ಥಳಕ್ಕೆ ಇಂದು ವಿಧಾನಪರಿಷತ್ ಸದಸ್ಯ ಶಾಂತಾರಾಮ್ ಸಿದ್ಧಿ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ದುರಸ್ತಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕುಂದರಗಿ ಪಂಚಾಯತ್ ಸದಸ್ಯರಾದ ಶ್ರೀ ಗಣೇಶ ಹೆಗಡೆ,ಪ್ರಮುಖರಾದ ಶ್ರೀ ಹೆರಂಭ ಹೆಗಡೆ,ಭಾಜಪ ಎಸ್.ಟಿ.ಮೊರ್ಚ ಜಿಲ್ಲ ಕಾರ್ಯದರ್ಶಿಗಳಾದ ಶ್ರೀ ರವಿ ಸಿದ್ದಿ ,ಎಸ್.ಡಿ.ಎಮ್.ಸಿ ಸದಸ್ಯರಾದ ಶ್ರೀ ಕೃಷ್ಣ ಹುದ್ದಾರ ,ಶಿಕ್ಷಕರು ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್, ಯಲ್ಲಾಪುರ

Exit mobile version