Important
Trending

ಕಬ್ಬಿಣದ ಸಲಾಕೆಯನ್ನು ಕೊಂಡೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಸಲಾಕೆ ತಗುಲಿ ವ್ಯಕ್ತಿ ಸಾವು

ಕಾರವಾರ: ಕಬ್ಬಿಣದ ಸಲಾಕೆಯನ್ನು ಕೊಂಡೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಸಲಾಕೆ ತಾಗಿದ ಹಿನ್ನೆಲೆಯಲ್ಲಿ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ನಗರದ ಗುನಗಿವಾಡಾದ ವಾಸಿಯಾದ ನವೀನ ಗುನಗಿ (21) ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ. ಈತ ಸೆಂಟ್ರಿoಗ್ ಕೆಲಸ ಮಾಡುತ್ತಿದ್ದು, ಕಬ್ಬಿಣದ ರಾಡೊಂದನ್ನು ಕೊಂಡೊಯ್ಯುತ್ತಿದ್ದ ವೇಳೆ ಅನಾಹುತ ಸಂಭವಿಸಿದೆ.

ಅಕಸ್ಮಾತಾಗಿ ವಿದ್ಯುತ್ ಸಂಪರ್ಕಕ್ಕೆ ಬಂದ ಹಿನ್ನಲೆಯಲ್ಲಿ ಸ್ಥಳದಲ್ಲಿಯೇ ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಯಿತು. ಆದರೆ, ಆಸ್ಪತ್ರೆಗೆ ತಲುಪುವ ಮುನ್ನವೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಕಾರವಾರ ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button