Important
Trending

ಮಂಗನಕಾಯಿಲೆಗೆ ಮಹಿಳೆ ಬಲಿ: ವಾರದಲ್ಲಿ 8 ಕೇಸ್ ಪತ್ತೆ: ಜಿಲ್ಲೆಯಲ್ಲಿ ಮಂಗನಕಾಯಿಲೆ ಕಾಟ

ಸಿದ್ದಾಪುರ: ಉತ್ತರಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಬಿಟ್ಟು ಬಿಡದೆ ಕಾಡುತ್ತಿದ್ದು, ಇದೀಗ ಶಿವಮೊಗ್ಗ ಮೆಗ್ಗಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಾಪುರದ ಮಹಿಳೆ ಮಂಗನಕಾಯಿಲೆಯಿoದ ಮೃತಪಟ್ಟಿದ್ದಾಳೆ. ಹಲಗೇರಿಯ ಜಾನಕಿ ವೀರಭದ್ರ ಹೆಗಡೆ(85) ಎನ್ನುವವಳು ಮೃತ ಮಹಿಳೆ ಎಂದು ತಿಳಿದುಬಂದಿದೆ.

ಒಂದು ವಾರದ ಅವಧಿಯಲ್ಲಿ ಒಟ್ಟು 8 ಸೋಂಕಿತರು ಪತ್ತೆಯಾಗಿದ್ದು, ಸಿದ್ದಾಪುರ ತಾಲೂಕಿನ ಹಲಗೇರಿ, ಕೋಲ್ ಸಿರ್ಸಿ, ಕಾನಸೂರು, ಬೀಗಳಿ ಗ್ರಾಮದಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ, ಹೊನ್ನಾವರ ತಾಲೂಕಿನ ಗೇರುಸೋಪ್ಪಾದಲ್ಲಿ ಮಂಗನಕಾಯಿಲೆ ಒಕ್ಕರಿಸಿದೆ. ಉಳಿದ ಏಳು ಮಂದಿ ಸೋಂಕಿನಿoದ ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button