Follow Us On

Google News
Important
Trending

ಲಾರಿ ಮತ್ತು ಕಂಟೇನರ್ ನಡುವೆ ಅಪಘಾತ : ಲಾರಿ ಚಾಲಕನಿಗೆ ಗಂಭೀರ ಗಾಯ

ಕುಮಟಾ: ಕಂಟೇನರ್ ಹಾಗು ಲಾರಿ ನಡುವೆ ಅಫಘಾತ ಸಂಭವಿಸಿ, ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕೀನ ದುಂಡುಕುಳಿಯ ಬೊಂಬೆ ಬಬ್ರ ದೇವಸ್ಥಾನ ಸಮೀಪ ನಡೆದಿದೆ. ಸ್ಥಳಿಯರ ಸಹಾಯದಿಂದ ಗಾಯಾಳುಗಳನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು , ಹೆಚ್ಚಿನ ಚಿಕಿತ್ಸೆಗೆ ಉಡುಪಿ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಕಂಟೇನರ್ ಚಾಲಕನ ಅಜಾಗರುಕತೆ ಚಾಲನೆಯೇ ಅಫಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಈ ಕುರಿತು ಗೌಡಪ್ಪ ರಾಮಪ್ಪ ಮೆಘೂರ ಕಂಟೇನರ್ ಚಾಲಕನ ಮೇಲೆ ಪ್ರಕರಣ ದಾಖಲಾಗಿದೆ. ಲಾರಿ ಚಾಲಕ ರಿಯಾಜ್ ಅಬ್ಬಾಸ್ ಉಡುಪಿ ಮೂಲದವನು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪಿ ಎಸ್ ಐ ನವೀನ್ ನಾಯ್ಕ ಭೇಟಿ ನಿಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button