ಡಿವೈಡರ್ ಗೆ ಗುದ್ದಿದ ಕಾರು: ಜಿಲ್ಲಾ ಪಂಚಾಯತ್ ಸದಸ್ಯ ಮತ್ತು ವಕೀಲ ಹಾಗು ಚಾಲಕನಿಗೆ ಗಾಯ

ಕುಮಟಾ: ರಸ್ತೆ ಅಪಘಾತದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ರತ್ನಾಕರ್ ನಾಯ್ಕ ಮತ್ತು ವಕೀಲ ಆರ್ ಜಿ ನಾಯ್ಕ ಗಾಯಗೊಂಡಿದ್ದು, ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಲ್ಲಿ ವ್ಯಾಸಾಂಗ ಮಾಡುತ್ತಿರುವ ಪುತ್ರಿಯನ್ನು ನೋಡಿಕೊಂಡು ವಾಪಸ್ ಬರುತ್ತಿರುವ ವೇಳೆ ದುರ್ಘಟನೆ ನಡೆದಿದೆ.

ಕಾರು ಡಿವೈಡರ್ ಗೆ ಗುದ್ದಿದ ಪರಿಣಾಮ ಚಾಲಕ ಸೇರಿ ಇಬ್ಬರಿಗೆ ಗಾಯವಾಗಿದೆ ಎನ್ನಲಾಗಿದೆ. ಎದುರಿಗೆ ಬಂದ ಪಾದಚಾರಿಯನ್ನು ತಪ್ಪಿಸಲು ಹೋದ ವೇಳೆ ಕಾರು ಡಿವೈಡರ್ ಗೆ ಗುದ್ದಿದೆ.

ಮಂಗಳೂರಿನಿಂದ‌ ಕುಂದಾಪುರಕ್ಕೆ ಬರುತ್ತಿದ್ದ ಕಾರು ಕುಂದಾಪುರದ ನಾವುಂದ ಬಳಿ ಅಪಘಾತವಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ವಿಸ್ಮಯ ನ್ಯೂಸ್ ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version