ಅತಿಯಾದ ಮೊಬೈಲ್ ಬಳಕೆ; ಬುದ್ದಿವಾದ ಹೇಳಿದಕ್ಕೆ ಯುವತಿ ಆತ್ಮಹತ್ಯೆ

ಕಾರವಾರ: ಅತಿಯಾದ ಮೊಬೈಲ್ ಬಳಕೆ ಮಾಡುತ್ತಿದ್ದ ಯುವತಿಗೆ ಮೊಬೈಲ್ ಬಳಕೆ ಮಾಡದಂತೆ ಬುದ್ದಿವಾದ ಹೇಳಿದ್ದಕ್ಕೆ ಮುನಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹಬ್ಬುವಾಡದಲ್ಲಿ ನಡೆದಿದೆ.

ಮೂಲತಃ ಸಿದ್ದಾಪುರದ ನಗರದ ಹಬ್ಬುವಾಡದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಮೇಘ ಆತ್ಮಹತ್ಯೆ ಮಾಡಿಕೊಂಡ ಯುವತಿ. ಪ್ಯಾರಾಮೇಡಿಕ್ ಕೋರ್ಸ್ ಮುಗಿಸಿಕೊಂಡು ಮನೆಯಲ್ಲಿದ್ದ ಯುವತಿ ಮೊಬೈಲ್ ಅತಿಯಾಗಿ ಬಳಕೆ ಮಾಡುವುದನ್ನು ಗಮನಿಸಿದ ಪಾಲಕರು ಬೈದು ಬುದ್ದಿವಾದ ಹೇಳಿದ್ದಾರೆ. ಆದರೆ ಇದನ್ನೆ ಮನಸ್ಸಿಗೆ ಹಚ್ಚಿಕೊಂಡು ಯುವತಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version