Follow Us On

WhatsApp Group
Important
Trending

ಪಿಎಸ್ಐ ನಾಗಪ್ಪ ಅವರು ಬರೆದಿರುವ ‘ನೆತ್ತರಲಿ ನೆಂದ ಹೂವು’ ಎಂಬ ಚೊಚ್ಚಲ ಅಪ್ರಕಟಿತ ಕವನ ಸಂಕಲನಕ್ಕೆ ‘ದ.ರಾ.ಬೇಂದ್ರೆ ನೆನಪಿನ ದತ್ತಿ ಪ್ರಶಸ್ತಿ

ಕಾರವಾರ: ಸಂಚಾರ ಪೋಲಿಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿಎಸ್ಐ ನಾಗಪ್ಪ ಅವರು ಬರೆದಿರುವ ‘ನೆತ್ತರಲಿ ನೆಂದ ಹೂವು’ ಎಂಬ ಚೊಚ್ಚಲ ಅಪ್ರಕಟಿತ ಕವನ ಸಂಕಲನ ಗಮನಸೆಳೆದಿದೆ. ಇದ ಹಸ್ತಪ್ರತಿಯು ವಿದ್ಯಾಧರ ಕನ್ನಡ ಪ್ರತಿಷ್ಠಾನ ಮುಂಬಯಿ- ಧಾರವಾಡ ಘಟಕ ನೀಡುವ ‘ದ.ರಾ.ಬೇಂದ್ರೆ ನೆನಪಿನ ದತ್ತಿ ಪ್ರಶಸ್ತಿ- 2022’ ಪೊತ್ಸಾಹಕರ ವಿಭಾಗದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದೆ.

ವಿಧ್ಯಾದರ ಕನ್ನಡ ಪ್ರತಿಷ್ಠಾನ ಸಂಸ್ಥೆಯ ವತಿಯಿಂದ ನಡೆಯುವ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ದ.ರಾ.ಬೇಂದ್ರೆ ನೆನಪಿನ ದತ್ತಿ ಪ್ರಶಸ್ತಿ, ಅಭಿನಂಧನಾ ಪತ್ರ, ಸ್ಮರಣಿಕೆ ಮತ್ತು ನಗದು ಪ್ರಶಸ್ತಿ ಬಹುಮಾನ ನೀಡಿ ಗೌರವಿಸಲಾಗುವುದೆಂದು ಪ್ರತಿಷ್ಠಾನದ ಅಧ್ಯಕ್ಷ ವಿಧ್ಯಾದರ ಮುತಾಲಿಕ ದೇಸಾಯಿ ಮಾಹಿತಿ ನೀಡಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button