ರಾಷ್ಟ್ರಮಟ್ಟದ ವಾಲಿಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಉತ್ತರಕನ್ನಡದ ಹುಡುಗ

ಶಿರಸಿ: ಮಹಾರಾಷ್ಟ್ರದ ಇಸ್ಲಾಂಪುರದಲ್ಲಿ ಮೇ 10 ರಿಂದ 15 ರವರೆಗೆ ನಡೆಯಲಿರುವ 24 ನೇ ರಾಷ್ಟ್ರಮಟ್ಟದ ಯುವ ವಾಲಿಬಾಲ್ ಚಾಂಪಿಯನ್ ಶಿಪ್ ಗೆ ಕರ್ನಾಟಕದ ಶಿರಸಿಯ ಕನ್ನಡದ ಯುವಕ ಆಯ್ಕೆಯಾಗಿದ್ದಾನೆ. ಮೂಲತಃ ಶಿರಸಿ ತಾಲೂಕಿನ ಬಾಬನಕಟ್ಟೆ ನಿವಾಸಿಯಾಗಿರುವ ಹಾಗೂ ಹಾಲಿ ನವಿಮುಂಬಯಿ ನಿವಾಸಿಗಳಾದ ಭಾರತಿ ಮತ್ತು ಸತೀಶ್ ಹೆಗಡೆ ದಂಪತಿಯ ಪುತ್ರನಾಗಿರುವ ಆದಿತ್ಯ ಹೆಗಡೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಈತ ಮಹಾರಾಷ್ಟ್ರ ರಾಜ್ಯದ ತಂಡದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಈ ಹಿಂದೆ ಜೂನಿಯರ್ ವಿಭಾಗ, ಸೀನಿಯರ್ ವಿಭಾಗದಲ್ಲಿ ಆಡಿ ವಿಶ್ವ ವಿದ್ಯಾಲಯ ಮಟ್ಟದಲ್ಲಿ, ರಾಜ್ಯ, ರಾಷ್ಟ್ರಮಟ್ಟದ ಚಾಂಪಿಯನ್ ಶಿಪ್ ನಲ್ಲಿ ಆಡಿದ್ದಾರೆ. ಆದಿತ್ಯ ಹೆಗಡೆ. ಈಗ ಮಹಾರಾಷ್ಟ್ರದ ಯುವ ತಂಡದಲ್ಲಿ ಕನ್ನಡದ ಹುಡುಗನಾಗಿ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version