Follow Us On

Google News
Important
Trending

ಸ್ಕೂಟಿಗೆ ಡಿಕ್ಕಿಹೊಡೆದ ಟ್ಯಾಂಕರ್: ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಸಾವು

ಭಟ್ಕಳ: ಗ್ಯಾಸ್ ಟ್ಯಾಂಕರ್ ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ ಘಟನೆ ತಾಲೂಕಿನ ಮೂಡಭಟ್ಕಳ ಬೈಪಾಸ್ ಬಳಿ ನಡೆದಿದೆ. ಮೃತ ವ್ಯಕ್ತಿ ಇಕ್ಬಾಲ್ ಮುಲ್ಲಾ ಬೈಂದೂರು ತಾಲ್ಲೂಕಿನ ಶಿರೂರ ಅಡುವಿನ ಕೋಣೆ ನಿವಾಸಿ ಎಂದು ತಿಳಿದು ಬಂದಿದೆ.

ಮಂಗಳೂರು ಕಡೆಯಿಂದ ಹೊನ್ನಾವರ ಕಡೆಗೆ ಅತಿ ವೇಗ ಮತ್ತು ಅಜಾಗರುಕತೆಯಿಂದ ಚಲಾಯಿಸಿಕೊಂಡು ಬಂದ ಗ್ಯಾಸ್ ಟ್ಯಾಂಕರ್ ಲಾರಿ ಚಾಲಕ, ಅದೇ ಮಾರ್ಗದಲ್ಲಿ ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಬರುತ್ತಿದ್ದ ಸ್ಕೂಟಿಗೆ ಹಿಂಬದಿಯಿoದ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ನಡೆದಿದೆ. ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Back to top button