Follow Us On

WhatsApp Group
Important
Trending

ಪೊಲೀಸ್ ಜೀಪ್ ಡಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಸಾವು

ಭಟ್ಕಳ: ಪೊಲೀಸ್ ಜೀಪ್ ಡಿಕ್ಕಿಯಾಗಿ ಮಹಿಳೆಯೊಬ್ಬಳು ಮೃತಪಟ್ಟಿರುವ ಘಟನೆ ಶಿರಾಲಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ವಿಜಯ ರಘು ಹೊನ್ನಾವರಕರ ವೆಂಕಟಾಪುರ ಹಿಂದೂ ಕಾಲೋನಿ ನಿವಾಸಿ ಎಂದು ತಿಳಿದುಬಂದಿದೆ. ಬೆಳಕೆ ಕಡೆಯಿಂದ ಶಿರಾಲಿ ಕಡೆಗೆ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಪೈಲಟ್ ಮಾಡುವ ಸಲುವಾಗಿ ಬೆಳಕೆ ಕಡೆಯಿಂದ ಸಾರದಹೊಳೆ ಕಡೆಗೆ ಸೈರನ್ ಹಾಕಿಕೊಂಡು ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66 ಶಿರಾಲಿಯ ಶ್ರೀ ಕೃಷ್ಣ ಪ್ರಸಾದ ಹೋಟೆಲ್ ಹತ್ತಿರ ಪೊಲೀಸ್ ವಾಹನ ತಲುಪುತ್ತಿದ್ದಂತೆಯೇ ಹೋಟೆಲ್ ಕಡೆಯಿಂದ ಹಾದಿಮಾಸ್ತಿ ದೇವಸ್ಥಾನದ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದ ಮಹಿಳೆಯನ್ನು ಗಮನಿಸಿದ ವಾಹನ ಚಾಲಕ ಒಮ್ಮೆಲೆ ಜೀಪ್ ಬ್ರೇಕ್ ಹಾಕಿದ್ದಾನೆ. ಆದರೆ, ಪೊಲೀಸ್ ಜೀಪ್ ನಿಯಂತ್ರಣ ತಪ್ಪಿ ರಸ್ತೆ ದಾಟುತ್ತಿದ್ದ ಮಹಿಳೆ ಡಿಕ್ಕಿಹೊಡೆದಿದೆ. ಅಪಘಾತ ಪಡಿಸಿದ ಪರಿಣಾಮ ಮಹಿಳೆ ರಸ್ತೆ ಮೇಲೆ ಬಿದ್ದು ಬಲಗಾಲಿಗೆ ತೀವ್ರ ಪೆಟ್ಟಾಗಿದ್ದು, ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಆಂಬ್ಯುಲೆನ್ಸ್ ಮೂಲಕ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸುವ ಪೂರ್ವದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ . ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Back to top button