Follow Us On

WhatsApp Group
Focus News
Trending

ಕಾರ್ಯಕರ್ತರೊಂದಿಗೆ ಸಭೆ ನಡೆಸಿದ ಸಚಿವ ಶಿವರಾಮ್ ಹೆಬ್ಬಾರ್

ಮುಂಡಗೋಡ: ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ತಾಲೂಕಿನ ಪಾಳಾ ಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರೊoದಿಗೆ ಕಾರ್ಯಕರ್ತರ ಸಭೆ ನಡೆಸಿದರು. ಪಾಳಾ ಶಕ್ತಿ ಕೇಂದ್ರದ ವ್ಯಾಪ್ತಿಯ ಕಾರ್ಯಕರ್ತರ ಅಹವಾಲನ್ನು ಸ್ವೀಕರಿಸಿ, ಕಾರ್ಯಕರ್ತರ ಹಾಗೂ ಬೂತ್ ಅಧ್ಯಕ್ಷರ ಜೊತೆಯಲ್ಲಿ ಗ್ರಾಮದ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಿದರು. ಕಾರ್ಯಕರ್ತರೊoದಿಗೆ ಸುದೀರ್ಘವಾಗಿ ಪಕ್ಷ ಸಂಘಟನೆಯ ಕುರಿತು ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

Back to top button