Important
Trending

ತೋಟದಲ್ಲಿ ನೀರಿನ ಪಂಪ್ ಚಾಲು ಮಾಡಲು ಹೋದ ವೇಳೆ ಅವಾಂತರ: ವಿದ್ಯುತ್ ಶಾಕ್ ತಗುಲಿ ಮಹಿಳೆ ಸಾವು

ಕುಮಟಾ: ತೋಟದಲ್ಲಿ ನೀರಿನ ಪಂಪ್ ಚಾಲು ಮಾಡಲು ಹೋದ ಗೃಹಿಣಿಗೆ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ ತಾಲೂಕಿನ ಬಾಡ ಗುಡೇಅಂಗಡಿಯಲ್ಲಿ ನಡೆದಿದೆ. ಸುಧಾ ರಮೇಶ ನಾಯ್ಕ (52) ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಗೃಹಿಣಿ ಎಂದು ತಿಳಿದುಬಂದಿದೆ.

ಸುಧಾ ನಾಯ್ಕ ಅವರು ಮನೆಯ ಹತ್ತಿರದ ತೋಟಕ್ಕೆ ನೀರುಹಾಕುವ ಉದ್ದೇಶದಿಂದ ಪಂಪ್ ಚಾಲು ಮಾಡಲು ಸ್ವಿಚ್ ಹಾಕುವಾಗ ಶಾಕ್ ತಗಲಿ ಈ ದುರ್ಘಟನೆ ಸಂಭವಿಸಿದೆ. ವಿದ್ಯುತ್ ಶಾಕ್ ನಿಂದ ಗೃಹಿಣಿ ಸ್ಥಳದಲ್ಲೆ ಕುಸಿದುಬಿದ್ದಿದ್ದು, ತಕ್ಷಣ ಅವರನ್ನು ತಾಲೂಕು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಮಹಿಳೆ ಬದುಕುಳಿಯಲಿಲ್ಲ.

ವಿಸ್ಮಯ ನ್ಯೂಸ್, ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Back to top button