ಮನೆಯ ಹಿಂಬದಿಯ ಕಾಲುವೆಯಲ್ಲಿ ಬಿದ್ದು ಬಾಲಕ ಸಾವು: ಆಟವಾಡುತ್ತಿದ್ದ ವೇಳೆ ನಡೆಯಿತು ಘೋರ ದುರಂತ

ಭಟ್ಕಳ: ನೀರು ಹರಿಯುವ ಕಾಲುವೆಯಲ್ಲಿ ಬಿದ್ದು ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಬೆಂಗ್ರೆ -2 ಪಡುಶಿರಾಲಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ವಿಜೇತ ಗಣಪತಿ ನಾಯ್ಕ 4 ವರ್ಷ ಎಂದು ತಿಳಿದು ಬಂದಿದೆ.

ಬಾಲಕ ಅಂಗನವಾಡಿಗೆ ಹೋಗುತ್ತಿದ್ದು ಬೆಳಿಗ್ಗೆ ಶಾಲೆಗೆ ಹೋಗಿದ್ದು, ಮಧ್ಯಾಹ್ನ ತಾಯಿ ಮಗನನ್ನು ಮನೆಗೆ ಕರೆದುಕೊಂಡು ಬಂದು ಆಟ ಆಡಲು ಬಿಟ್ಟು ತಾನು ಮನೆ ಕೆಲಸ ಮಾಡುತ್ತಿದ್ದಳು.

ಆಟ ಆಡುತ್ತಿದ್ದ ವಿಜೇತ ಈತನು ಕಳೆದ 2-3 ದಿನಗಳಿಂದ ಸತತವಾಗಿ ಸುರಿದ ಮಳೆಯ ಪರಿಣಾಮದಿಂದಾಗಿ ಪಡುಶಿರಾಲಿಯಲ್ಲಿ ಮಳೆ ನೀರು ಹರಿದು ಹೋಗುವ ಬಾಲಕನ ಮನೆಯ ಹಿಂಬದಿಯಕಾಲುವೆ ಹತ್ತಿರ ಹೋಗಿ ಕಾಲುವೆಯಲ್ಲಿ ಹರಿಯುತ್ತಿರುವ ನೀರಿನಲ್ಲಿ ಬಿದ್ದಿದ್ದಾನೆ.

ತಕ್ಷಣ ಆತನನ್ನು ಶಿರಾಲಿ ಸರ್ಕಾರಿ ಆಸ್ಪತ್ರೆಗೆ ಕಡೆದುಕೊಂಡು ಹೋಗುವವರೆಗೆ ಬಾಲಕ ಸಾವನ್ನಿಪ್ಪಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಈ ಕುರಿತು ಮುರುಡೇಶ್ವರ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Exit mobile version