Follow Us On

WhatsApp Group
Important
Trending

ದೊಡ್ಡಮ್ಮನ ಮನೆಗೆ ಮಗನೊಂದಿಗೆ ಹೋದ ಪತ್ನಿ ವಾಪಸ್ ಬರುವುದಿಲ್ಲ ಎಂದು ತಿಳಿದು ಪತಿ ಸಾವಿಗೆ ಶರಣು

ಸಿದ್ದಾಪುರ: ಬೇಸರ ಮಾಡಿಕೊಂಡಿದ್ದ ಹೆಂಡತಿಯು ತನ್ನ ದೊಡ್ಡಮ್ಮನ ಮನೆಗೆ ಹೋದವಳು ಮಗನೊಂದಿಗೆ ಪುನಹ ಮನೆಗೆ ಬರುವುದಿಲ್ಲ ಎಂದು ತಪ್ಪಾಗಿ ಅರ್ಥೈಸಿಕೊಂಡ ಗಂಡನು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿದ್ದಾಪುರದ ಕುಣಜಿಯಲ್ಲಿ ನಡೆದಿದೆ. ಪ್ರಶಾಂತ್ ಬಸವರಾಜ್ ಗೌಡರ 44 ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ.

ಕಳೆದ ಎರಡು ವರ್ಷ ಗಳಿಂದ ಸಂಸಾರದಲ್ಲಿ ಹೊಂದಾಣಿಕೆ ಬಾರದೆ ಮುನಿಸಿಕೊಂಡು ಈತನ ಹೆಂಡತಿ ತವರಿಗೆ ಹೋಗಿದ್ದಳು. ನಂತರ ಹಿರಿಯರು ಸೇರಿ ಪಂಚಾಯಿತಿ ಮಾಡಿದ್ದರು. ಶಾಲೆಗೆ ರಜೆ ಬಂದ ಮೇಲೆ ಮಗನೊಂದಿಗೆ ಅವರ ದೊಡ್ಡಮ್ಮನ ಮನೆಗೆ ಹೋದವಳು ಮನೆಗೆ ಬರುವುದಿಲ್ಲ ಎಂದು ತಿಳಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button