Important
Trending

ಪಾದಚಾರಿಗೆ ಡಿಕ್ಕಿ ಹೊಡೆದು ರಸ್ತೆ ಪಕ್ಕ ಬಿದ್ದು ಅವಾಂತರ: ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಹ ಸವಾರ ಸಾವು : ಇಬ್ಬರಿಗೆ ಗಂಭೀರ ಗಾಯ

ಯಲ್ಲಾಪುರ: ಬ್ರೇಕ್ ಕೇಬಲ್ ಕಟ್ ಆಗಿ ಬೈಕ್ ಮೇಲೆ ನಿಯಂತ್ರಣ ಕಳೆದುಕೊಂಡ ಸವಾರ ಪಾದಚಾರಿಗೆ ಡಿಕ್ಕಿ ಹೊಡೆದು, ನಂತರ ರಸ್ತೆ ಪಕ್ಕದ ರೇಲಿಂಗ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಹ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ಕೋರ್ಟ್ ರಸ್ತೆಯ ಬಳಿ ನಡೆದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಸಹಸವಾರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಮೃತವ್ಯಕ್ತಿಯನ್ನು ಕಿರವತ್ತಿ ನಿವಾಸಿ ಸಿ.ಬಿ ಗುಡದೂರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬೈಕ್ ಸವಾರ, ಪಾದಚಾರಿ ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾನೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಳಿಜಾರಿನಲ್ಲಿ ಬೈಕಿನ ಬ್ರೇಕ್ ಕೇಬಲ್ ಕಟ್ ಆಗಿದ್ದರ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button