Important
Trending

ಕಂಟೇನರ್ ಲಾರಿ ಓವರ್ ಟೇಕ್ ಮಾಡಲು ಹೋಗಿ ಬಸ್ಸಿಗೆ ಡಿಕ್ಕಿ ಹೊಡೆದುಕೊಂಡ ಸ್ಕೂಟಿ ಸವಾರ: ಗಂಭೀರ ಗಾಯ

ಅಂಕೋಲಾ: ಸ್ಕೂಟಿ ವಾಹನ ಸಾರಿಗೆ ಸಂಸ್ಥೆಯ ಬಸ್ಸಿಗೆ ಡಿಕ್ಕಿ ಹೊಡೆದು ವಾಹನ ಸವಾರ ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಅವರ್ಸಾ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ಕಾರವಾರ ತಾಲೂಕಿನ ಮುದಗಾ ನಿವಾಸಿ ಕಿರಣ ಪಾಂಡುರಂಗ ತಾಂಡೇಲ್ ಗಂಭೀರ ಗಾಯಗೊಂಡ ವ್ಯಕ್ತಿ,

ಈತ ಅಂಕೋಲಾ ಕಡೆಯಿಂದ ಕಾರವಾರ ಕಡೆ ಅತಿ ವೇಗದಲ್ಲಿ ಸ್ಕೂಟಿ ಚಲಾಯಿಸಿ ಎದುರುಗಡೆ ಬಸ್ಸು ಬರುತ್ತಿರುವುದನ್ನು ಕಂಡರೂ, ಕಂಟೇನರ್ ವಾಹನವನ್ನು ಓವರ್ ಟೇಕ್ ಮಾಡಿ ರಸ್ತೆಯ ಬಲ ಬದಿಗೆ ಬಂದಿದ್ದು, ಬಸ್ ಚಾಲಕ ತನ್ನ ವಾಹನವನ್ನು ಎಡಕ್ಕೆ ತೆಗೆದುಕೊಂಡು ಹೋದರೂ ಸ್ಕೂಟಿ ಸವಾರ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡು ಬಸ್ಸಿಗೆ ಹಿಂಬದಿ ಟಯರ್ ಬಳಿ ಡಿಕ್ಕಿ ಹೊಡೆದ ಪರಿಣಾಮ ಅತನ ತಲೆ ಮುಂಭಾಗಕ್ಕೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿರುವುದಾಗಿ ಹೇಳಲಾಗುತ್ತಿದ್ದು,ಆಸ್ಪತ್ರೆಗೆ ದಾಖಲಿಸಲಾಗಿದೆ.  ಬಸ್ ಚಾಲಕ ರಾಜೇಶ ರಾಕು ನಾಯಕ ಅವರು ಘಟನೆಗೆ ಸಂಬಂಧಿಸಿದಂತೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.  ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button