Important
Trending

ಕಲ್ಲಿನ ಮೇಲೆ ನಿಂತು ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ: ಅಲೆಯ ರಭಸಕ್ಕೆ ಸಿಲುಕಿ ಯುವಕ ಸಾವು

ಗೋಕರ್ಣ: ಇತ್ತಿಚೆಗೆ ಪ್ರವಾಸಕ್ಕೆ ಬರುವವರು ಮೋಜಿ-ಮಸ್ತಿಗೆ ಇಳಿದೋ ಅಥವಾ ಫೋಟೋ ಕ್ರೇಜಿಗಾಗಿ ತಮ್ಮ ಜೀವವನ್ನೇ ಕಳೆದುಕೊಳ್ಳುತ್ತಿರುವ ಘಟನೆ ಹೆಚ್ಚುತ್ತಿದೆ. ಹೌದು, ಸೆಲ್ಫಿಗೀಳು ಯುವಕನೊಬ್ಬನನ್ನು ಬಲಿ ಪಡೆದ ಘಟನೆ ಇಲ್ಲಿನ ವಿಶ್ವಪ್ರಸಿದ್ಧ ಓಂ ಬೀಚ್ ಬಳಿ ನಡೆದಿದೆ. ಬೆಂಗಳೂರು ಮೂಲದ ರಾಕೇಶ್ ಗೌಡ ಮೃತಪಟ್ಟ ಯುವಕ,. ಈತ ತನ್ನ ಗೆಳೆಯರೊಂದಿಗೆ ಗೋಕರ್ಣ ಪ್ರವಾಸಕ್ಕೆ ಬಂದಿದ್ದ.

ಗೆಳೆಯರೊಂದಿಗೆ ವಿಶ್ವಪ್ರಸಿದ್ಧ ಓಂ ಬೀಚ್ ನೋಡಲು ಹೋಗಿದ್ದು, ಈ ವೇಳೆ, ಕಲ್ಲಿನ ಮೇಲೆ ನಿಂತು ಸೆಲ್ಫಿ ತೆಗೆಯಲು ಮುಂದಾದಾಗ, ಸಮುದ್ರದ ಅಲೆಗೆ ಸಿಕ್ಕಿದ್ದು, ಅಲೆಯ ರಭಸಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಈ ಸಂಬoಧ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಗೋಕರ್ಣ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button