Follow Us On

WhatsApp Group
Important
Trending

ತಾನೆ ಸಾಕಿ ಬೆಳೆಸಿದ ಬೆಕ್ಕನ್ನು ರಕ್ಷಿಸಲು ಹೋಗಿ ಯುವಕ ಸಾವು: ಆಸ್ಪತ್ರೆಗೆ ಸಾಗಿಸುವ ಮಧ್ಯೆ ಕೊನೆಯುಸಿರು

ಕುಮಟಾ: ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಅಸ್ವಸ್ಥನಾದ ಯುವಕನನ್ನು ಆಸ್ಪತ್ರೆಗೆ ದಾಖಲಿಸುವಾಗ ಮಾರ್ಗಮಧ್ಯೆ ಮೃತಪಟ್ಟಿರುವ ಘಟನೆ ತಾಲೂಕಿನ ಹರ್ಕಡೆಯಲ್ಲಿ ನಡೆದಿದೆ. ತಾಲೂಕಿನ ಹರ್ಕಡೆ ನಿವಾಸಿ ರಾಜೇಂದ್ರ ವಿಠೋಬ ಆಚಾರಿ ಮೃತ ಯುವಕ ಎಂದು ತಿಳಿದುಬಂದಿದೆ.

ಈತ ಮನೆಯಲ್ಲಿ ಸಾಕಿದ ಬೆಕ್ಕಿನ ಜೊತೆ ಆಟವಾಡುತ್ತಿದ್ದ. ಈ ವೇಳೆ ಬೆಕ್ಕು ಬಾವಿಗೆ ಬಿದ್ದಿದೆ. ಬೆಕ್ಕನ್ನು ರಕ್ಷಿಸಲು ಹೋದ ರಾಜೇಂದ್ರ ಬಾವಿಗೆ ಬಿದ್ದು ಅಸ್ವಸ್ಥಗೊಂಡಿದ್ದನು. ಇದನ್ನು ಗಮನಿಸಿದ ಕುಟುಂಬಸ್ಥರು ಸ್ಥಳೀಯರ ಸಹಕಾರದಲ್ಲಿ ರಾಜೇಂದ್ರನನ್ನು ಬಾವಿಯಿಂದ ಮೇಲೆಕ್ಕೆತ್ತಿದ್ದಾರೆ. ಅಲ್ಲದೇ ಈತನನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸುತ್ತಿರುವಾಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಮೃತಪಟ್ಟಿದ್ದಾನೆ. ಕುಮಟಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button