Important
Trending

ಕಾರವಾರದಲ್ಲಿ ಎಸಿಬಿ ದಾಳಿ: ಇಬ್ಬರು ಅಧಿಕಾರಿಗಳಿಗೆ ಶಾಕ್

ಅಧಿಕಾರಿಗಳ ತಂಡದಿoದ ದಾಖಲೆ ಪತ್ರಗಳ ಪರಿಶೀಲನೆ

ಕಾರವಾರ: ಬೆಳ್ಳಂ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ಪಿಡಬ್ಲ್ಯೂಡಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿ ಶಾಕ್ ನೀಡಿರುವ ಘಟನೆ ನಗರದಲ್ಲಿ ನಡೆದಿದೆ. ಕುಮಟಾ ಮೂಲದ ಕಾರವಾರದಲ್ಲಿರುವ PWD ಇಂಜಿನಿಯರ್ ರಾಜೀವ್ ನಾಯ್ಕ ಹಾಗೂ ಜಿಲ್ಲಾ ನೊಂದಣಾಧಿಕಾರಿ ಶ್ರೀಧರ್ ಎಸಿಬಿ ದಾಳಿಗೆ ಒಳಗಾದ ಅಧಿಕಾರಿಗಳಾಗಿದ್ದು, ಕಾರವಾರ ನಗರದ ಎಂ.ಜಿ ರಸ್ತೆಯಲ್ಲಿರುವ ಬೃಂದಾವನ ಅಪಾರ್ಟ ಮೆಂಟ್, ಹಬ್ಬುವಾಡದ ಮನೆಯ ಮೇಲೆ ದಾಳಿ ನಡೆಸಲಾಗಿದೆ.

ಆದಯಕ್ಕಿಂತಲೂ ಹೆಚ್ಚಿನ ಸಂಪತ್ತು ಹೊಂದಿದ ಆರೋಪದ ಹಿನ್ನೆಲೆಯಲ್ಲಿ ಕಾರವಾರ ಎಸಿಬಿ ಡಿವೈ ಎಸ್ ಪಿ ಪ್ರಕಾಶ್ ನೇತ್ರತ್ವದ ತಂಡ ಹಾಗೂ ಹುಬ್ಬಳ್ಳಿಯ ಎಸಿಬಿ ಅಧಿಕಾರಿಗಳ ಎರಡು ಪ್ರತ್ಯೇಕ ತಂಡಗಳು ದಾಳಿ ನಡೆಸಿವೆ. ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನು ತಿಳಿದುಬರಬೇಕಿದೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button