ಮರಕ್ಕೆ‌ ಡಿಕ್ಕಿ ಹೊಡೆದ ಕಾರು: ಚಾಲಕ‌ ಸ್ಥಳದಲ್ಲೇ‌ ಸಾವು

ಶಿರಸಿ: ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ದೇವನಳ್ಳಿಯ ಸರಗುಪ್ಪ ಮಾರಿಕಾಂಬಾ ದೇವಾಲಯದ ಬಳಿ ನಡೆದಿದೆ.

ಮೃತ ವ್ಯಕ್ತಿ ಉಮೇಶ ಮರಾಠಿ ಬೆಣಗಾಂವ್ಎಂದು ಗುರುತಿಸಲಾಗಿದ್ದು, ಘಟನೆಯ ತೀವ್ರತೆಗೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ‌ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ಶಿರಸಿ

Exit mobile version