ಅನಧಿಕೃತವಾಗಿ ಗಾಂಜಾ ಸಾಗಾಟ: ಇಬ್ಬರ ಬಂಧನ

ಯಲ್ಲಾಪುರ: ಬಿಜಾಪುರದಿಂದ ಕೇರಳಕ್ಕೆ ಅನಧಿಕೃತವಾಗಿ ಗಾಂಜಾ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಪಟ್ಟಣದ ಜೋಡಕೆರೆ ಚೆಕ್ ಪೋಸ್ಟ್ ಬಳಿ ಪೊಲೀಸರು ದಾಳಿ ನಡೆಸಿ ಆರೋಪಗಳನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಆರೋಪಿತರಾದ ಮಹಮ್ಮದ್ ಶೋಪಿಯಾನ ಅಬ್ದುಲ್ ಹಕಿಂ ಪುತ್ತೂರು, ಸಮೀರ ಟಿಎಟಿ ಅಬುಕರ ಕಾಸರಗೋಡ ಇವರನ್ನು ವಶಕ್ಕೆ ಪಡೆಯಲಾಗಿದೆ. ಇನ್ನೊರ್ವ ಆರೋಪಿ ಪರಾರಿಯಾಗಿದ್ದಾನೆ. ಬಂಧಿತರಿoದ 1 ಕೆ.ಜಿ.180 ಗ್ರಾಂ ಗಾಂಜಾ, ಸ್ವೀಪ್ಟ್ ಕಾರು, ವಶಕ್ಕೆ ಪಡೆಯಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

Exit mobile version