ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಲಾರಿ: ಸ್ಥಳದಲ್ಲೇ ಬೈಕ್ ಸವಾರ ಸಾವು

ಭಟ್ಕಳ: ಅಶೋಕ ಲೈಲ್ಯಾಂಡ್ ವಾಹನವೊಂದು ಚಲಿಸುತ್ತಿದ್ದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಾರುತಿ ಶೋ ರೂಮ್ ಸಮೀಪ ನಡೆದಿದೆ. ಮೃತ ಬೈಕ್ ಸವಾರನನ್ನು ಬೆಳಗಾಂ ಮೂಲದ ಚಿಕ್ಕೋಡಿ ನಿವಾಸಿ ರಾಜೇಂದ್ರ ಯಕ್ಷoಬೆ ಎಂದು ತಿಳಿದು ಬಂದಿದೆ.

ಈತ ಕುಂದಾಪುರ ಕಡೆಯಿಂದ ಭಟ್ಕಳಕಡೆ ಬರುವ ವೇಳೆಯಲ್ಲಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಮಾರುತಿ ಶೋ ರೂಮ್ ಸಮೀಪ ಅಶೋಕ ಲೈಲ್ಯಾಂಡ್ ವಾಹನವೊಂದನ್ನು ಅತಿ ವೇಗ ಹಾಗೂ ಅಜಾಗರುಕತೆಯಿಂದ ವಾಹನ ಚಲಾಯಿಸಿಕೊಂಡ ಬಂದ ಚಾಲಕ ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಅಪಘಾತ ಪಡಿಸಿದ್ದಾನೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಬೈಕ್ ಸಮೇತ ರಸ್ತೆ ಮೇಲೆ ಬಿದ್ದಿದ್ದು, ಅಪಘಾತದಲ್ಲಿ ಬೈಕ್ ಸಾವಾರನ ತಲೆ ಹಾಗೂ ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ತಕ್ಷಣ ಆತನ್ನ ಆಸ್ಪತ್ರೆಗೆ ಸಾಗಿಸಲಾಯ್ತು. ಆದರೆ, ಆಸ್ಪತ್ರೆಗೆ ತಲುಪುವ ವೇಳೆ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Exit mobile version