Important
Trending

ಗಾಂಜಾ ಸೇದುವ ಯುವಕರ ಮನೆಯ ಮೇಲೆ ದಾಳಿ: ಎಂಟು ಮಂದಿ ವಶಕ್ಕೆ: ವೈದ್ಯಕೀಯ ಪರೀಕ್ಷೆಗೆ ರವಾನೆ

ಶಿರಸಿ: ಕಳೆದ ಹಲವು ದಿನಗಳಿಂದ ಗಾಂಜಾ ವ್ಯವಹಾರ ಕದ್ದು ಮುಚ್ಚಿ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಗುರುವಾರ ಬೆಳ್ಳಂಬೆಳಗ್ಗೆ ಗಾಂಜಾ ಸೇದುವ ಯುವಕರ ಮನೆಯ ಮೇಲೆ ದಾಳಿ ನಡೆಸಿದ ಶಿರಸಿ ಮಾರುಕಟ್ಟೆ ಪೊಲೀಸರು 8 ಜನರನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ. ವಶ ಪಡಿಸಿಕೊಂಡ ಎಂಟು ಜನರನ್ನು ಕಾರವಾರದ ಕಿಮ್ಸ್ ಆಸ್ಪತ್ರೆಗೆ ವೈಧ್ಯಕೀಯ ಪರೀಕ್ಷೆಗಾಗಿ ಕರೆದುಕೊಂಡು ಹೋಗಿದ್ದಾರೆ.

ಕಳೆದ ಹಲವು ದಿನಗಳಿಂದ ಗಾಂಜಾ ಸಂಪೂರ್ಣವಾಗಿ ಶಿರಸಿಯಲ್ಲಿ ಬಂದ್ ಆಗಿದ್ದು ಆದರೂ ಕದ್ದು ಮುಚ್ಚಿ ಸೇದುತ್ತಿದ್ದಾರೆ ಎಂಬ ಬಗ್ಗೆ ಕೆಲವು ಪಾಲಕರೆ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು 8 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪೆನ್ನೇಕರ್  ಡಿ.ಎಸ್.ಪಿ. ರವಿ ನಾಯ್ಕ ಮಾರ್ಗದರ್ಶನ ದಲ್ಲಿ ಸಿ.ಪಿ.ಐ. ರಾಮಚಂದ್ರ ನಾಯಕ ಅವರ ನೇತೃತ್ವದಲ್ಲಿ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Back to top button