ಸತತ ಮೂರುದಿನ ಕಾರ್ಯಾಚರಣೆ: ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದ ಮತ್ತಿಬ್ಬರ ಶವಪತ್ತೆ

ಕುಮಟಾ: ಪ್ರವಾಸಕ್ಕೆ ಬಂದು ಸಮುದ್ರ ಪಾಲಾಗಿದ್ದ ಬೆಂಗಳೂರಿನ ಇನ್ನಿಬ್ಬರು ಪ್ರವಾಸಿಗರ ಶವ ಮೂರನೇ ದಿನ ಪತ್ತೆಯಾಗಿದೆ. ಸತತ ಮೂರು ದಿನದ ನಂತರ ಸಮುದ್ರದ ಅರ್ಧ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಶವ ಪತ್ತೆಯಾಗಿದೆ. ರಾಜಾಜಿನಗರ ಹಾಲಿ ಜೆಪಿ ನಗರದ ಸಿಎ ವಿದ್ಯಾರ್ಥಿ ತೇಜಸ್ ದಾಮೋದರ ಹಾಗು ಬೆಂಗಳೂರಿನ ಕನಕಪುರ ರಸ್ತೆಯ ಸಿಎ ಫಾರ್ಮ್ ನೌಕರ ಕಿರಣಕುಮಾರ್ ಮರಿರಾಜ.ಜಿ ಶವ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಬೆoಗಳೂರಿನ ಖಾಸಗಿ ಕಂಪನಿಯ ಸುಮಾರು 80 ಸಿಬ್ಬಂದಿಯ ಜೊತೆಗೆ ಕೆಲ ವಿದ್ಯಾರ್ಥಿಗಳು ಕೂಡ ಪ್ರವಾಸಕ್ಕೆಂದು ಕುಮಟಾ ತಾಲೂಕಿನ ಬಾಡದ ಕಡಲತೀರಕ್ಕೆ ಆಗಮಿಸಿದ್ದರು. ಸಮುದ್ರಕ್ಕಿಳಿದ ಕೆಲ ಪ್ರವಾಸಿಗರ ಪೈಕಿ ನಾಲ್ವರು ಪ್ರವಾಸಿಗರು ಸಮುದ್ರ ಪಾಲಾಗಿದ್ದರು. ಅದರಲ್ಲಿ ಇಬ್ಬರ ಶವ ಪತ್ತೆಯಾಗಿತ್ತು, ಇನ್ನಿಬ್ಬರ ಶವ ಪತ್ತೆ ಹಚ್ಚಲು ಸಮುದ್ರದಲ್ಲಿ ಶೋಧ ಕಾರ್ಯ ಮುಂದುವರೆದಿತ್ತು.

ವಿಸ್ಮಯ ನ್ಯೂಸ್, ಕುಮಟಾ

Exit mobile version