ಗೋಕರ್ಣದ ಕೋಟಿತೀರ್ಥದಲ್ಲಿ ಮುಳುಗಿ ವ್ಯಕ್ತಿ ಸಾವು: ದೂರು ದಾಖಲು

ಗೋಕರ್ಣ: ಹೊಸದಾಗಿ ಕೋಟಿತೀರ್ಥವನ್ನು ನವೀಕರಣಗೊಳಿಸಿದ್ದು, ಹಚ್ಚ ಹಸಿರಿನ ನೀರಿನಿಂದ ಕಂಗೊಳಿಸುತ್ತಿದೆ. ಇದರ ಬೆನ್ನಲ್ಲೆ ದುರಂತವೊoದು ನಡೆದಿದ್ದು, ಕೋಟಿ ತೀರ್ಥದಲ್ಲಿ ಮುಳುಗಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿಯನ್ನು ಗೋಕರ್ಣದ ಮೇಲಿನಕೇರಿ ನಿವಾಸಿ ಸಂತೋಷ ರೆಬೆಲೋ ಎಂದು ಗುರುತಿಸಲಾಗಿದೆ.

ಕೋಟಿತೀರ್ಥಕ್ಕೆ ತೆರಳಿದ ಸಂದರ್ಭದಲ್ಲಿ ಕಾಲುಜಾರಿಬಿದ್ದು ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್, ಗೋಕರ್ಣ

Exit mobile version