ಬಸ್ ನಿಲ್ದಾಣದಲ್ಲಿ ಮಹಿಳೆಯ ಬ್ಯಾಗಿನಿಂದ ಹಣ, ಆಭರಣ ಕಳ್ಳತನ ಪ್ರಕರಣ: ಮೂವರು ಮಹಿಳೆಯರ ಬಂಧನ

ಕುಮಟಾ: ಮಹಿಳೆಯ ಬ್ಯಾಗಿನಿಂದ ಬಂಗಾರದ ಆಭರಣ ಹಾಗೂ ನಗದನ್ನು ಎಗರಿಸಿದ್ದ ಮೂವರು ಮಹಿಳಾ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜೂನ್ 21ರಂದು ಮಹಿಳೆಯೊಬ್ಬಳು ಇಲ್ಲಿನ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಅವರ ಬ್ಯಾಗಿನ ಜಿಪ್ ತೆರೆದು ಅದರಲ್ಲಿದ್ದ ಸುಮಾರು 124 ಗ್ರಾಂ ತೂಕದ ಬಂಗಾರದ ಆಭರಣಗಳು ಮತ್ತು 50 ಸಾವಿರ ರೂಪಾಯಿ ನಗದನ್ನು ಕಳ್ಳರು ಎಗರಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಕುಮಟಾ ಪೊಲೀಸರು ಬೆಂಗಳೂರಿನ ಅತ್ತಿಬೆಲೆ ನಿವಾಸಿಗಳಾದ ಆದಿಯಮ್ಮ ತಿರುಪತಿ, ವೆಂಕ್ಟಮ್ಮ ತಿರುಪತಿ ಹಾಗೂ ಲಲಿತಾ ನಾಗರಾಜ ಇವರುಗಳನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತರಿAದ ಕಳ್ಳತನವಾದ ಎಲ್ಲಾ ಬಂಗಾರದ ಆಭರಣಗಳನ್ನು ಮತ್ತು 6030 ರೂ. ನಗದನ್ನು ಜಪ್ತು ಮಾಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾಗಿಯಾದ ಎಲ್ಲಾ ಅಧಿಕಾರಿ, ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

Exit mobile version