ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಸೇವಾ ನಿವೃತ್ತ ಸಿಬ್ಬಂದಿಗೆ ಬೀಳ್ಕೊಡುಗೆ

ಶಿರಸಿ : ಶ್ರೀ ದೇವಸ್ಥಾನದಲ್ಲಿ ಸೇವೆ ಸಲ್ಲಿಸಿದ ಶ್ರೀ ಮಧುಕೇಶ್ವರ ಸುಬ್ರಾಯ ಭಟ್ಟ, ಶ್ರೀಮತಿ ಮಹಾಲಕ್ಷಿ. ಭಂಡಾರಿ, ಶ್ರೀಮತಿ ಗೌರಿ ನಾಯ್ಕ, ಶ್ರೀಮತಿ ಗೌರಿ ಮಂಗಳಾ ಅವರು ಇಂದು ದಿನಾಂಕ: ೩೦-೦೬-೨೦೨೨ ರಂದು ಸೇವಾ ನಿವೃತ್ತಿ ಹೊಂದಿದರು. ಈ ಸಂದರ್ಭದಲ್ಲಿ ಶ್ರೀ ದೇವಾಲಯದ ಧರ್ಮದರ್ಶಿ ಮಂಡಳಿ ಹಾಗೂ ಎಲ್ಲ ಸಿಬ್ಬಂದಿಯವರು ಸೇರಿ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿ ಅಭಿನಂದನೆ ಸಲ್ಲಿಸಿ ಶ್ರೀ ದೇವಿಯ ಅನುಗ್ರಹಯುಕ್ತ ಪ್ರಸಾದ, ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಧರ್ಮದರ್ಶಿ ಮಂಡಳಿಯ ಸದಸ್ಯರು ಹಾಗೂ ಸಿಬ್ಬಂದಿಗಳು ಅವರ ಸೇವಾ ಅವಧಿಯಲ್ಲಿ ಅವರು ಸಲ್ಲಿಸಿದ ಸೇವೆಯ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿ ಅವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶ್ರೀ ಮಧುಕೇಶ್ವರ ಸುಬ್ರಾಯ ಭಟ್ಟ ಅವರು ತಮ್ಮ ಸೇವಾ ಅವಧಿಯಲ್ಲಿನ ಅನುಭವ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಧರ್ಮದರ್ಶಿ ಮಂಡಳಿಯ ಅಧ್ಯಕ್ಷರಾದ ಶ್ರೀ ರವೀಂದ್ರ. ಜಿ. ನಾಯ್ಕ , ಉಪಾಧ್ಯಕ್ಷರಾದ ಶ್ರೀ ಸುದೇಶ. ಜಿ. ಜೋಗಳೇಕರ, ಧರ್ಮದರ್ಶಿಗಳಾದ ಶ್ರೀ ಸುಧೀರ. ಎಸ್. ಹಂದ್ರಾಳ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಚಂದ್ರಕಾoತ. ಜಿ. ನಾಯ್ಕ ಮತ್ತು ಎಲ್ಲ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version