
ಕಾರವಾರ: ಉತ್ತರಕನ್ನಡ ಸೇರಿದಂತೆ ರಾಜ್ಯದ ಕರಾವಳಿ ಭಾಗದಲ್ಲಿ ಜುಲೈ 8ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 5 ಮತ್ತು 6 ರಂದು ಮಳೆಯ ತೀವ್ರತೆ ಹೆಚ್ಚಿರುವ ಸಾಧ್ಯತೆಯಿದೆ. ಈಹಿನ್ನಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ
- ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಈಗಿನಿಂದಲೇ ಸಮಯಕ್ಕೆ ಮಹತ್ವ ನೀಡಿ : ಡಾ. ಗಣೇಶ ನಾಗ್ವೇಕರ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಮ್ಮೇಳನ
- ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಕೇಣಿಯಲ್ಲಿ ಸರ್ವಋತು ಆಳ ಸಮುದ್ರ ಗ್ರೀನ್ಫೀಲ್ಡ್ ಬಂದರಿನ ಅಭಿವೃದ್ಧಿ

ಅಲ್ಲದೆ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಜುಲೈ 8ರ ವರೆಗೂ ಮಳೆ ಮುಂದುವರಿಯ ಸಾಧ್ಯತೆಯಿದೆ ಎನ್ನಲಾಗಿದೆ. ಆರೇಂಜ್ ಮತ್ತು ಯಲ್ಲೊ ಅಲರ್ಟ್ ಘೋಷಣೆ ಮಾಡಿದ ಬೆನ್ನಲ್ಲೆ, ಕಡಲತೀರ ಪ್ರದೇಶದಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಸಮುದ್ರ ತೀರ ಪ್ರದೇಶದಲ್ಲಿ ಗಾಳಿಯು ಪ್ರತಿ ಗಂಟೆಗೆ ಸುಮಾರು 50 ಕೀಲೋಮೀಟರ್ ವೇಗದಲ್ಲಿ ಬೀಸಲಿದ್ದು, ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ವಿಸ್ಮಯ ನ್ಯೂಸ್, ಕಾರವಾರ
