ಗೋಕರ್ಣ: ಇಲ್ಲಿನ ಕಡಲತೀರದ ರುದ್ರಪಾದ ಕಲಿಯಪ್ಪನ ಕಟ್ಟೆ ಹತ್ತಿರ ಇರುವ ಹೊಟೇಲ್ ವೊಂದು ಅಗ್ನಿ ಅವಘಡ ಸಂಭವಿಸಿದ್ದು, ಹೊಟೇಲ್ ಬೆಂಕಿಗೆ ಆಹುತಿ ಆಗಿರುವ ಘಟನೆ ನಡೆದಿದೆ. ಬೆಳಗಿನ ಜಾವದಲ್ಲಿ ಹೊಟೇಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ವಸತಿ ಮತ್ತು ಹೊಟೇಲ್ ಕಟ್ಟಡಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ..
- ಆರೋಗ್ಯದಲ್ಲಿ ಆಕಸ್ಮಿಕ ಏರುಪೇರು: ಲಕ್ಷ್ಮೇಶ್ವರದ ರವೀಂದ್ರ ಮುರಾರಿ ನಾಯ್ಕ ವಿಧಿವಶ
- ಅಡಿಕೆ ಧಾರಣೆ: ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ದರದ ವಿವರ ಹೇಗಿದೆ ನೋಡಿ?
- ಬಸ್ ನಿಲ್ದಾಣದಲ್ಲಿ ನಿಲ್ಲಿಸಿಟ್ಟ ಬೈಕ್ ಕಳ್ಳತನ: ನಸುಕಿನ ವೇಳೆ ಕೃತ್ಯ?
ಅದೃಷ್ಟ ವಶಾತ್ ದುರ್ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಗೋಕರ್ಣ ಪೊಲೀಸರು ಈ ಘಟನೆಯನ್ನು ಪರಿಶೀಲಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಿಡ್ಜ್ ಸೇರಿ ಹಲವು ಉಪಕರಣಗಳು ಬೆಂಕಿಗೆ ಆಹುತಿಯಾಗಿದೆ.. ಯಾರು ಇಲ್ಲದ ಸಮಯದಲ್ಲಿ ಈ ದುರ್ಘಟನೆ ನಡೆದಿದ್ದು ಸಂಭಾವ್ಯ ಅನಾಹುತವೊಂದು ತಪ್ಪಿದಂತಾಗಿದೆ.
ವಿಸ್ಮಯ ನ್ಯೂಸ್ ಕಾರವಾರ