ಮಹಿಳೆ ಮೇಲೆ ಕುಸಿದುಬಿದ್ದ ಮನೆಯಗೋಡೆ: ತವರು ಮನೆಗೆ ಆಗಮಿಸಿದ್ದ ವೇಳೆ ದುರ್ಘಟನೆ

ಭಟ್ಕಳ: ತವರು ಮನೆಗೆ ತೆರಳಿದ್ದ ಮಹಿಳೆಯೋರ್ವರ ಮೇಲೆ ಮನೆ ಗೋಡೆ ಕುಸಿದು ಬಿದ್ದ ಘಟನೆ ಶಿರಾಲಿ ಚಿತ್ತಾಪುರದ ಬಡಿಕಾಸ್ ನಲ್ಲಿ ನಡೆದಿದೆ. ಅದೃಷ್ಟವಶಾತ್ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಗಾಯಗೊಂಡ ಮಹಿಳೆಯನ್ನು ಭಾರತಿ ಮಾಸ್ತಪ್ಪ ನಾಯ್ಕ (38) ಎಂದು ತಿಳಿದು ಬಂದಿದೆ.

ತಾಲೂಕಿನಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ. ಶಿರಾಲಿ ಚಿತ್ತಾಪುರದ ಬಡಿಕಾಸ್ ನಲ್ಲಿ ತನ್ನ ಗಂಡನ ಮನೆಯಿಂದ ತವರು ಮನೆಗೆ ಬಂದಿದ್ದ ಮಹಿಳೆಯ ಮೇಲೆ ಮನೆಯ ಗೋಡೆ ಕುಸಿದು ಬಿದ್ದಿದೆ. ಗಾಯಗೊಂಡ ಮಹಿಳೆಯನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಗಾಗಿ ಕುಂದಾಪುರ ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳಕ್ಕೆ ಮಾವಳ್ಳಿ ಕಂದಾಯ ನಿರೀಕ್ಷಕ ಶ್ರೀನಿವಾಸ ಮಾಸ್ತಿ,ಗ್ರಾಮ ಲೆಕ್ಕಾಧಿಕಾರಿ ಹೇಮಾ ನಾಯ್ಕ,ಪಂಚಾಯತ್ ಪಿ.ಡಿ.ಓ,ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿದ್ದಾರೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Exit mobile version