
ಕಾರವಾರ: ಉತ್ತರ ಕನ್ನಡದ ಕರಾವಳಿ ಭಾಗದ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಮತ್ತು ಘಟ್ಟದ ಮೇಲಿನ ತಾಲೂಕುಗಳಾದ ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲಾ-ಕಾಲೇಜು, ಅಂಗನವಾಡಿ ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ನಾಳೆ ಶುಕ್ರವಾರ (ಜುಲೈ 8) ರಂದು ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
- ವೀರಭದ್ರೇಶ್ವರ ಬೀರದೇವ ದೇವಸ್ಥಾನದ ಪಕ್ಕದಲ್ಲಿ ನೂತನ ಸಮುದಾಯ ಭವನ: ಮೇ 4 ರಂದು ಭವ್ಯ ಕಟ್ಟಡ ಉದ್ಘಾಟನೆ
- ಭಟ್ಕಳದ ಮುಂಡಳ್ಳಿಯಲ್ಲಿ MGM ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ ಶಾಖೆ ಶುಭಾರಂಭ
- KSRTC ಬಸ್ ಮತ್ತು ಕಾರ್ ನಡುವೆ ಭೀಕರ ಅಪಘಾತ: ಇಬ್ಬರ ಸಾವು?
ಶಾಲಾ ಮಕ್ಕಳ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34(ಎಮ್) ರಡಿ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರವರಿಗೆ ಪ್ರದತ್ತವಾದ ಅಧಿಕಾರದ ಮೇರೆಗೆ ಸದ್ರಿ ತಾಲೂಕಿನ ಎಲ್ಲಾ ಶಾಲಾ-ಕಾಲೇಜು, ಅಂಗನವಾಡಿ ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ 08-07-2022 ರಂದು ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ 08-07-2022 ರ ಬೆಳಿಗ್ಗೆ 08-30 ಗಂಟೆಯಿಂದ ದಿನಾಂಕ: 09-07-2022 ರ ಬೆಳಿಗ್ಗೆ 08-30 ರವರೆಗೆ ಭಾರಿ ಮಳೆಯಾಗುವ ಸೂಚನೆ (ಆರೆಂಜ್ ಅಲರ್ಟ್ )ನ್ನು ನೀಡಲಾದ ಹಿನ್ನಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ವಿಸ್ಮಯ ನ್ಯೂಸ್ ಕಾರವಾರ
